ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು

Edited By:

Updated on: May 11, 2024 | 4:37 PM

ಇತ್ತೀಚೆಗೆ ಮೊಬೈಲ್​ ಕಳ್ಳತನ ಜಾಸ್ತಿಯಾಗಿದೆ. ಎಷ್ಟೇ ಜಾಗರೂಕರಾಗಿದ್ದರೂ ಕೂಡ ಕ್ಷಣಾರ್ಧದಲ್ಲಿ ಈ ಮೊಬೈಲ್​ ಕಳ್ಳರ ಗ್ಯಾಂಗ್​ ನಿಮ್ಮ ಫೋನ್​ಗಳನ್ನು ಎಗರಿಸಿ ಬಿಡುತ್ತಾರೆ. ಅದರಂತೆ ಇಂದು(ಮೇ.11) ಉಡುಪಿ (Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿರುವ ಘಟನೆ ನಡೆದಿದೆ.

ಉಡುಪಿ, ಮೇ,11: ಉಡುಪಿ(Udupi) ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಕದಿಯಲು ಬಂದ ಕಳ್ಳಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಖತರ್ನಾಕ್ ಮೊಬೈಲ್ ಕಳ್ಳತನ ಗ್ಯಾಂಗ್​ನಲ್ಲಿದ್ದ ಇಬ್ಬರು ಕಳ್ಳಿಯರು ಸ್ಥಳದಿಂದ ಎಸ್ಕೇಪ್ ಆಗಿದ್ದು, ಬಸ್ ಹತ್ತುವ ವೇಳೆ ಮೊಬೈಲ್ ಕದ್ದು ಪರಾರಿಯಾಗಲು ಯತ್ನಿಸಿದ್ದರು. ಇನ್ನು ಸೆರೆ ಸಿಕ್ಕ ಓರ್ವಳನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಬಳಿಕ ಆಕೆಯನ್ನು ಸಾರ್ವಜನಿಕರು ಸೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More