AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಮತ್ತು ವಿರೋಧ ಪಕ್ಷಗಳ ಆಕ್ರೋಶದ ಎಫೆಕ್ಟ್​​: ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?

ಸಾರ್ವಜನಿಕ ಮತ್ತು ವಿರೋಧ ಪಕ್ಷಗಳ ಆಕ್ರೋಶದ ಎಫೆಕ್ಟ್​​: ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?

ಪ್ರಸನ್ನ ಗಾಂವ್ಕರ್​
| Edited By: |

Updated on: Sep 03, 2026 | 1:14 PM

Share

ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ಆಕ್ರೋಶದ ನಂತರ ಕರ್ನಾಟಕ ಉದ್ಯಾನವನ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯುವ ಸಾಧ್ಯತೆಯಿದೆ. ಹೈಕಮಾಂಡ್‌ನಿಂದಲೂ ವಿರೋಧ ವ್ಯಕ್ತವಾಗಿದ್ದು, ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಬೆಂಗಳೂರಿನ ಉದ್ಯಾನವನಗಳ ರಕ್ಷಣೆಗೆ ಆಗ್ರಹಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿಂದೆ ಗದ್ದಲದ ನಡುವೆ ವಿಧೇಯಕವನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿತ್ತು.

ಬೆಂಗಳೂರು, ಸೆಪ್ಟೆಂಬರ್​​ 03: ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಂತರ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ ಇದೆ. ಈ ವಿಚಾರವಾಗಿ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ವಿರೋಧ ವ್ಯಕ್ತವಾಗಿದೆ. ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಈ ವಿಧೇಯಕವನ್ನು ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ.ಕಳೆದ ಅಧಿವೇಶನದಲ್ಲಿ ತರಾತುರಿಯಲ್ಲಿ ಅಂಗೀಕರಿಸಲಾಗಿದ್ದ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್‌ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರ ಪ್ರಮುಖ ಆತಂಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯುವ ಸರ್ಕಾರದ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us