ಸಾರ್ವಜನಿಕ ಮತ್ತು ವಿರೋಧ ಪಕ್ಷಗಳ ಆಕ್ರೋಶದ ಎಫೆಕ್ಟ್: ರಾಜ್ಯ ಸರ್ಕಾರದಿಂದ ಉದ್ಯಾನವನ ತಿದ್ದುಪಡಿ ಮಸೂದೆ ವಾಪಸ್?
ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ಆಕ್ರೋಶದ ನಂತರ ಕರ್ನಾಟಕ ಉದ್ಯಾನವನ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯುವ ಸಾಧ್ಯತೆಯಿದೆ. ಹೈಕಮಾಂಡ್ನಿಂದಲೂ ವಿರೋಧ ವ್ಯಕ್ತವಾಗಿದ್ದು, ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಬೆಂಗಳೂರಿನ ಉದ್ಯಾನವನಗಳ ರಕ್ಷಣೆಗೆ ಆಗ್ರಹಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿಂದೆ ಗದ್ದಲದ ನಡುವೆ ವಿಧೇಯಕವನ್ನು ತರಾತುರಿಯಲ್ಲಿ ಅಂಗೀಕರಿಸಲಾಗಿತ್ತು.
ಬೆಂಗಳೂರು, ಸೆಪ್ಟೆಂಬರ್ 03: ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಂತರ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ ಇದೆ. ಈ ವಿಚಾರವಾಗಿ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ನಿಂದಲೂ ವಿರೋಧ ವ್ಯಕ್ತವಾಗಿದೆ. ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಈ ವಿಧೇಯಕವನ್ನು ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ.ಕಳೆದ ಅಧಿವೇಶನದಲ್ಲಿ ತರಾತುರಿಯಲ್ಲಿ ಅಂಗೀಕರಿಸಲಾಗಿದ್ದ ಈ ವಿಧೇಯಕಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಉದ್ಯಾನವನಗಳು ನಗರದ ಶ್ವಾಸಕೋಶ ಇದ್ದಂತೆ. ಅಂತಹ ಪ್ರಮುಖ ಉದ್ಯಾನವನಗಳ 5% ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವುದರಿಂದ ಪಾರ್ಕ್ಗಳು ನಶಿಸಿ ಹೋಗುತ್ತವೆ ಎಂಬುದು ಸಾರ್ವಜನಿಕರ ಪ್ರಮುಖ ಆತಂಕವಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳನ್ನು ಕಡಿಯುವ ಸರ್ಕಾರದ ನಡೆಯ ಬಗ್ಗೆಯೂ ಟೀಕೆ ವ್ಯಕ್ತವಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
