AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಬೀಡುಬಿಟ್ಟ ಡಿ.ಕೆ. ಶಿವಕುಮಾರ್​ ಬಣ: ಕುತೂಹಲ ಮೂಡಿಸಿದ ಶಾಸಕರ ನಡೆ

ದೆಹಲಿಯಲ್ಲಿ ಬೀಡುಬಿಟ್ಟ ಡಿ.ಕೆ. ಶಿವಕುಮಾರ್​ ಬಣ: ಕುತೂಹಲ ಮೂಡಿಸಿದ ಶಾಸಕರ ನಡೆ

ನವೀನ್ ಕುಮಾರ್ ಟಿ
| Edited By: |

Updated on:Nov 24, 2025 | 12:56 PM

Share

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವದ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ರಾಷ್ಟ್ರ ರಾಜಧಾನಿಯನ್ನ ಶಾಸಕರ ತಂಡ ತಲುಪಿದ್ದು, ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಿರಲಿಲ್ಲ.

ದೇವನಹಳ್ಳಿ, ನವೆಂಬರ್​​ 24: ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ದೆಹಲಿ ತಲುಪಿದ ಈ ಆರು ಶಾಸಕರ ತಂಡದಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜ್, ಇಕ್ಬಾಲ್ ಹುಸೇನ್, ಶಾಸಕಿ ನಯನಾ ಮೋಟಮ್ಮ ಮತ್ತು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸೇರಿದ್ದಾರೆ. ಈ ತಂಡವು ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಪಕ್ಷದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಿರಲಿಲ್ಲ. ಕಳೆದ ವಾರವೂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ದೆಹಲಿಗೆ ಭೇಟಿ ನೀಡಿದ್ದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 24, 2025 12:54 PM