ಹೈಕಮಾಂಡ್ನಿಂದ ಸಿಎಂಗೆ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್ ನೀಡಿದೆ. ಹೀಗಾಗಿ ಕಾಂಗ್ರೆಸ್ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ನಾಳೆ 11 ಗಂಟೆಗೆ ಹೈಕಮಾಂಡ್ ಪ್ರಶ್ನೆ ಪತ್ರಿಕೆ ಕೊಡುತ್ತೆ. ಆ ಬಳಿಕ ಪ್ರಶ್ನೆಗೆ ಉತ್ತರ ಟಿಕ್ ಮಾಡ್ತಾರೆ. ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ ಬಿಡಿ ಎಂದು ಪರೋಕ್ಷವಾಗಿ ಅಧಿಕಾರ ಹಂಚಿಕೆ ಚರ್ಚೆಗೆ ಬ್ರೇಕ್ ಬೀಳಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಬೆಂಗಳೂರು, (ಮೇ 25): ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವಿನ ಕುರ್ಚಿ ಕಾಳಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಶೀತಲ ಸಮರ ಕೇವಲ ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿಲ್ಲ. ಇದರ ಪ್ರತಿಧ್ವನಿ ರಾಷ್ಟ್ರ ರಾಜಧಾನಿ ದಿಲ್ಲಿಯವರೆಗೂ ತಲುಪಿದೆ. ರಾಜ್ಯ ಕಾಂಗ್ರೆಸ್ನ ಈ ಪವರ್ ಶೇರಿಂಗ್ ಗೊಂದಲದ ನಡುವೆ ಸಿಎಂಗೆ ಹೈಕಮಾಂಡ್ ಬುಲಾವ್ ನೀಡಿದೆ. ಹೀಗಾಗಿ ಕಾಂಗ್ರೆಸ್ನಲ್ಲಿನ ಕುರ್ಚಿ ಗುದ್ದಾಟಕ್ಕೆ ತೆರೆ ಬೀಳುತ್ತಾ ಎನ್ನುವ ಚರ್ಚೆ ಶುರುವಾಗಿದೆ. ಇನ್ನು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ನಾಳೆ 11 ಗಂಟೆಗೆ ಹೈಕಮಾಂಡ್ ಪ್ರಶ್ನೆ ಪತ್ರಿಕೆ ಕೊಡುತ್ತೆ. ಆ ಬಳಿಕ ಪ್ರಶ್ನೆಗೆ ಉತ್ತರ ಟಿಕ್ ಮಾಡ್ತಾರೆ. ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ ಬಿಡಿ ಎಂದು ಪರೋಕ್ಷವಾಗಿ ಅಧಿಕಾರ ಹಂಚಿಕೆ ಚರ್ಚೆಗೆ ಬ್ರೇಕ್ ಬೀಳಲಿದೆ ಎನ್ನುವ ಅರ್ಥದಲ್ಲಿ ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


