ಕೊಪ್ಪಳದಲ್ಲಿ ಗಾಳಿ ಮಳೆಯಬ್ಬರ: ಬೇರು ಸಮೇತ ನೆಲಕ್ಕುರುಳಿದ ಮರಗಳು, ಕ್ರೇನ್ ಧರಾಶಾಹಿ
ಕರ್ನಾಟಕದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ ಭಾರಿ ಅವಾಂತರಗಳು ನಡೆದಿವೆ. ಕೊಪ್ಪಳದ ಕುಷ್ಟಗಿಯಲ್ಲಿ ಬೃಹತ್ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಉರುಳಿದ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. ಇದೇ ವೇಳೆ, ತಾವರಗೇರಾದಲ್ಲಿ ಗಾಳಿಗೆ ಕ್ರೇನ್ ಪತನಗೊಂಡಿದ್ದು, ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದೆ.
ಕೊಪ್ಪಳ, ಮೇ 18: ಕರ್ನಾಟಕ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿ ವ್ಯಾಪಕ ಅನಾಹುತಗಳನ್ನು ಸೃಷ್ಟಿಸಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿನ್ನೆ (ಮೇ 17) ಸಂಜೆ ಸುರಿದ ಭಾರೀ ಮಳೆಯ ಆರ್ಭಟಕ್ಕೆ ಬೃಹತ್ ಮರಗಳು ಬೇರುಸಮೇತ ಧರೆಗುರುಳಿವೆ. ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿತ್ತು. ಮತ್ತೊಂದೆಡೆ ಮಳೆ ಮತ್ತು ಬಿರುಗಾಳಿಯ ಅಬ್ಬರಕ್ಕೆ ಕೊಪ್ಪಳದ ತಾವರಗೇರ ಪಟ್ಟಣದ ಬಳಿ ಬೃಹತ್ ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಕ್ರೇನ್ ಪತನಗೊಂಡಿದೆ. ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಈ ಕ್ರೇನ್ ಕುಸಿಯುವಾಗ ಅಲ್ಲೇ ಇದ್ದ ಕಾರ್ಮಿಕರು ಕೂದಲಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ, ಕೊಪ್ಪಳ ಮತ್ತು ಕುಷ್ಟಗಿ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
