AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯೋತ್ಸವ: ರಾಜ್ಯವನ್ನು ಉದ್ದೇಶಿಸಿ ಮಾತಾಡಿದ ಶಿವಕುಮಾರ್ ಕವಿಯಂತೆ ಕಂಡರು!

ಕರ್ನಾಟಕ ರಾಜ್ಯೋತ್ಸವ: ರಾಜ್ಯವನ್ನು ಉದ್ದೇಶಿಸಿ ಮಾತಾಡಿದ ಶಿವಕುಮಾರ್ ಕವಿಯಂತೆ ಕಂಡರು!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 01, 2024 | 12:00 PM

Share

ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಸಂದಿವೆ ಎಂದ ಶಿವಕುಮಾರ್, ದೇಶದ ಬೇರೆ ಯಾವುದೇ ರಾಜ್ಯಕ್ಕೆ ತನ್ನದೇ ಆದ ಧ್ವಜವಾಗಲೀ, ನಾಡಗೀತೆಯಾಗಲೀ ಇಲ್ಲ; ಆದರೆ ಕರ್ನಾಟಕಕ್ಕೆ ತನ್ನ ಧ್ವಜವಿದೆ ಮತ್ತು ರಾಷ್ಟ್ರಕವಿ ಕುವೆಂಪು ಅವರು ಬರೆದ ಸರ್ವಜನಾಂಗದ ಶಾಂತಿಯ ತೋಟ.....ಗೀತೆಯಿದೆ ಅಂತ ಹೇಳಿದರು.

ಬೆಂಗಳೂರು: ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಆಯಾಜಿಸಿದ ಕಾರ್ಯಕ್ರಮದಲ್ಲಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವನಿಗಿಂತ ಹೆಚ್ಚು ಕವಿಯಾಗಿ ಕಂಡರು. ಅವರ ಮಾತುಗಳಲ್ಲಿ ಕಾವ್ಯ, ಹಿರಿಯ ಸಾಹಿತಿಗಳ ಉಕ್ತಿಗಳು ಅಡಕವಾಗಿದ್ದವು. ಭಾಷಣವನ್ನು ಅವರು ಆಚಾರಕ್ಕೆ ಅರಸನಾಗು ನೀತಿಗೆ ಪ್ರಭುವಾಗು ಮಾತಿನಲ್ಲಿ ಚೂಡಾಮಣಿಯಾಗು ಮತ್ತು ಕನ್ನಡದ ಜ್ಯೋತಿಯನ್ನು ಜನಕ್ಕೆಲ್ಲ ಬೆಳಗು ಎಂದು ಅರಂಭಿಸಿ ಗುರು ಹಿರಿಯರು ಹೇಳಿರುವ ಮಾತುಗಳನ್ನು ಪಾಲಿಸುವ ಕರ್ತವ್ಯ ಕನ್ನಡಿಗರದ್ದು ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಆಯ್ತು ಈಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯಪಾಲರಿಗೆ ದೂರು: ಏನಿದು ಪ್ರಕರಣ?

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.