AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 11, 2026 | 10:45 PM

Share

ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳು ಈ ಯೋಜನೆಯಿಂದ ಅಂತರ್ಜಲ ಕುಸಿತ, ಭೂಕುಸಿತ, ಸಮುದ್ರದ ಉಪ್ಪು ನೀರಿನ ಒಳನುಗ್ಗುವಿಕೆ ಮತ್ತು ಮೀನುಗಾರಿಕೆಗೆ ಹಾನಿ ಸೇರಿದಂತೆ ಹಲವು ಪರಿಸರ ಸಮಸ್ಯೆಗಳಾಗುತ್ತವೆ ಎಂದು ಎಚ್ಚರಿಸಿದ್ದಾರೆ.

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.