AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls Results: ಕರ್ನಾಟಕದ ಮತದಾರ ಪ್ರಬುದ್ಧ, ವಿವೇಚನೆಯಿಂದ ಮತ ಚಲಾಯಿಸುತ್ತಾನೆ: ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

Karnataka Assembly Polls Results: ಕರ್ನಾಟಕದ ಮತದಾರ ಪ್ರಬುದ್ಧ, ವಿವೇಚನೆಯಿಂದ ಮತ ಚಲಾಯಿಸುತ್ತಾನೆ: ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on: May 13, 2023 | 1:35 PM

Share

ಗೆದ್ದಿರುವ ಮತ್ತು ಗೆಲುವಿನ ಹಂತದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಖರ್ಗೆ, ಸೋತ ಅಭ್ಯರ್ಥಿಗಳು ಎದೆಗುಂದಬಾರದು ಎಂದರು.

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರದರ್ಶನದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ (Mallikarjun Kharge) ಬೀಗುತ್ತಿದ್ದಾರೆ. ಆದರೆ ಗೆದ್ದ ಖುಷಿ ಮತ್ತು ಸಂಭ್ರಮದ ಭರದಲ್ಲಿ ಅವರು ಬಿಜೆಪಿ ನಾಯಕರ (BJP leaders ) ವಿರುದ್ಧ ಟೀಕಾಪ್ರಹಾರವೇನೂ ಮಾಡಲಿಲ್ಲ. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದರು. ಕರ್ನಾಟಕದ ಮತದಾರ (voter) ಚುನಾವಣೆಗಳಲ್ಲಿ ಪ್ರಬುದ್ಧತೆ ಪ್ರದರ್ಶಿಸುತ್ತಾನೆ ಮತ್ತು ವಿವೇಚನೆಯಿಂದ ಮತ ಚಲಾಯಿಸುತ್ತೇನೆ ಎಂದು ಅವರು ಹೇಳಿದರು. ಗೆದ್ದಿರುವ ಮತ್ತು ಗೆಲುವಿನ ಹಂತದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಖರ್ಗೆ ಅವರು, ಸೋತ ಅಭ್ಯರ್ಥಿಗಳು ಎದೆಗುಂದಬಾರದು ಎಂದರು. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ, ಸೋತವರು ತಮ್ಮ ಕ್ಷೇತ್ರಗಳಲ್ಲಿ ಇನ್ನೂ ಉತ್ತಮ ಕೆಲಸ ಮಾಡಿ ಮುಂದಿನ ಬಾರಿ ಗೆಲ್ಲುವ ಪ್ರಯತ್ನ ಮಾಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More