ವಕ್ಫ್ ವಿವಾದ: ವಿಜಯಪುರದಲ್ಲಿ ಅಹೋರಾತ್ರಿ ಧರಣಿ, ಟೆಂಟ್​ನಲ್ಲೇ ರಾತ್ರಿ ಕಳೆದ ಯತ್ನಾಳ್, ಶೋಭಾ

Edited By:

Updated on: Nov 05, 2024 | 7:55 AM

ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿರುವುದನ್ನು ಪ್ರತಿಭಟಿಸಿ ಮತ್ತು ವಕ್ಫ್ ಹೆಸರು ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ನೇತೃತ್ವದಲ್ಲಿ ನಡೆಯುತ್ತಿರುವ ರೈತರು ಅಹೋರಾತ್ರಿ ಧರಣಿ ನಡೆಸಿದರು. ಯತ್ನಾಳ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಧರಣಿ ನಿರತರು, ವಿಜಯಪುರ ಡಿಸಿ ಕಚೇರಿ ಬಳಿಯೇ ರಾತ್ರಿ ಕಳೆದರು. ವಿಡಿಯೋ ಇಲ್ಲಿದೆ.

ವಿಜಯಪುರ, ನವೆಂಬರ್ 5: ರೈತರ ಪಹಣಿಯಿಂದ ವಕ್ಫ್​​ ಪದ​ ತೆಗೆದುಹಾಕುವಂತೆ ಆಗ್ರಹಿಸಿ ವಿಜಯಪುರ ಡಿಸಿ ಕಚೇರಿ ಬಳಿ ರೈತರಿಂದ ಅಹೋರಾತ್ರಿ ಧರಣಿ, ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್​​ ನೀಡಿದ್ದಾರೆ. ಕೇಂದ್ರ ಸಚಿವೆಯೂ ಸೇರಿದಂತೆ ನೂರಾರು ರೈತರು, ಬಿಜೆಪಿ ಕಾರ್ಯಕರ್ತರು ಧರಣಿ ನಡೆಯುತ್ತಿರುವ ಪ್ರದೇಶದ ಟೆಂಟ್​ನಲ್ಲೇ ರಾತ್ರಿ ಕಳೆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More