ರಾಜ್ಯದ 195 ತಾಲ್ಲೂಕುಗಳು ಬರಪೀಡಿತ, ಬರ ಪರಿಹಾರ ನಿಧಿಗಾಗಿ ಕೇಂದ್ರಕ್ಕೆ ಪತ್ರ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 14, 2023 | 2:10 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಮೊದಲು ಮಹಾದಾಯಿ, ಕೃಷ್ಣಾ ಹಾಗೂ ಕಾವೇರಿ ನದಿ ನೀರು ವಿವಾದದ ಬಗ್ಗೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು ಅವರಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದರು. ಬರಪರಿಹಾರ ನಿಧಿಯಿಂದ ಎಷ್ಟು ನೆರವು ಕೇಳಲಿದ್ದೀರಿ ಅಂತ ಕೇಳಿದ ಪ್ರಶ್ನೆಗೆ ಅವರು ಅದಿನ್ನೂ ಲೆಕ್ಕಾಚಾರ ಮಾಡಿಲ್ಲ ಎಂದು ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ 195 ತಾಲ್ಲೂಕುಗಳು ಬರಪೀಡಿತ ಅನ್ನೋದು ಈಗ ಅಧಿಕೃತ. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ತಾಲ್ಲೂಕುಗಳ ಸಮೀಕ್ಷೆ ನಡೆಸಿದ ಬಳಿಕ ಎಸ್ ಡಿ ಅರ್ ಎಫ್ (SDRF) ಮತ್ತು ಎನ್ ಡಿ ಆರ್ ಎಫ್ (NDRF) ನಿಯಮಾವಳಿ ಅನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಅಂತ ಘೋಷಿಸಲಾಗಿದೆ ಎಂದು ಹೇಳಿದರು. ಬರ ಪರಿಹಾರ ನಿಧಿಗಾಗಿ ಕೇಂದ್ರಕ್ಕೆ ಮನವಿಯನ್ನು ಕರ್ನಾಟಕ ಸರ್ಕಾರ ಸಲ್ಲಿಸಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಜ್ಞಾಪನಾ ಪತ್ರವೊಂದನ್ನು (memorandum) ಅಲ್ಲಿಗೆ ಕಳಿಸಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಮೊದಲು ಮಹಾದಾಯಿ, ಕೃಷ್ಣಾ ಹಾಗೂ ಕಾವೇರಿ ನದಿ ನೀರು ವಿವಾದದ ಬಗ್ಗೆಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿದ್ದು ಅವರಿಂದ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿದರು. ಬರಪರಿಹಾರ ನಿಧಿಯಿಂದ ಎಷ್ಟು ನೆರವು ಕೇಳಲಿದ್ದೀರಿ ಅಂತ ಕೇಳಿದ ಪ್ರಶ್ನೆಗೆ ಅವರು ಅದಿನ್ನೂ ಲೆಕ್ಕಾಚಾರ ಮಾಡಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.