AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಅಕ್ಷಯ್​ ಪಲ್ಲಮಜಲು​​
|

Updated on: Mar 23, 2026 | 1:02 PM

Share

ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್‌ಗಳ ಪೂರೈಕೆಗೆ ಒಪ್ಪಿಗೆ ದೊರೆತಿದೆ. ಎಲ್ಲಾ ವಾಣಿಜ್ಯ ಬಳಕೆದಾರರು, ವಿಶೇಷವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ನೋಂದಾಯಿಸಿಕೊಳ್ಳಬೇಕು. ಇದು ಪೂರೈಕೆ ಸುಧಾರಿಸಲು ಮತ್ತು ಕಪ್ಪು ಮಾರುಕಟ್ಟೆಯನ್ನು ತಡೆಯಲು ಸಹಕಾರಿಯಾಗಿದೆ.

ಬೆಂಗಳೂರು, ಮಾ.23: ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. IOC, HP, GAIL ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್​​​ನಲ್ಲಿ ಮಾರಾಟ ಮಾಡುವುದನ್ನು ಹಾಗೂ ಅಧಿಕೃತವಲ್ಲದ ಮಾರುಕಟ್ಟೆಗೆ ಸಿಲಿಂಡರ್‌ಗಳು ಹೋಗುವುದನ್ನು ತಡೆಯಲು ಕೇಂದ್ರವು ನಿರ್ಣಯ ಕೈಗೊಂಡಿದೆ. ಅದರಂತೆ, ಎಲ್ಲಾ ವಾಣಿಜ್ಯ ಬಳಕೆದಾರರು, ಮುಖ್ಯವಾಗಿ ಹೋಟೆಲ್‌ಗಳು, ಒಂದು ವಾರದೊಳಗೆ GAIL ಕಂಪನಿಯೊಂದಿಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಇಲ್ಲದಿದ್ದರೆ ಸಿಲಿಂಡರ್ ವಿತರಣೆ ಕಷ್ಟವಾಗಲಿದೆ. ಈ ಕ್ರಮದಿಂದ ಕಪ್ಪು ಮಾರುಕಟ್ಟೆಯನ್ನು ತಡೆಯಬಹುದು ಮತ್ತು ಮುಂದಿನ ದಿನಗಳಲ್ಲಿ GAIL ಪೈಪ್‌ಲೈನ್ ಮೂಲಕ ಹೆಚ್ಚಿನ ಪೂರೈಕೆಗೆ ಅವಕಾಶವಾಗಲಿದೆ. ಈ ಹೆಚ್ಚುವರಿ ಪೂರೈಕೆಯು ರಾಜ್ಯದಲ್ಲಿ ವಾಣಿಜ್ಯ ಬಳಕೆದಾರರ ಬೇಡಿಕೆಯನ್ನು ಪೂರೈಸಲು ಸಹಾಯಕವಾಗಲಿದೆ. ಸದ್ಯಕ್ಕೆ, ರಾಜ್ಯದಲ್ಲಿ ಸುಮಾರು 15,000 ರಿಂದ 16,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆ ಇದೆ ಎಂದು ಅಂದಾಜಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More