ಕುಂಭಮೇಳದಲ್ಲೂ ಸದ್ದು ಮಾಡಿದ ಕರ್ನಾಟಕದ ಗುತ್ತಿಗೆ ಬಿಲ್ ಬಾಕಿ: ಪುಣ್ಯ ಸ್ನಾನದ ವೇಳೆ ಗುತ್ತಿಗೆದಾರ ಹರಕೆ

Edited By:

Updated on: Feb 05, 2025 | 11:46 AM

ಕುಂಭಮೇಳದಲ್ಲೂ ಸದ್ದು ಮಾಡಿದ ಕರ್ನಾಟಕದ ಗುತ್ತಿಗೆ ಬಿಲ್ ಬಾಕಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಕಾಮಗಾರಿಗಳ ಬಿಲ್ ಬಾಕಿ ಬಿಡುಗಡೆಯಾಗದೆ ಕಂಗಾಲಾಗಿರುವ ಗುತ್ತಿಗೆದಾರರು ಇದೀಗ ಪ್ರಯಾಗ್​ರಾಜ್ ಕುಂಭಮೇಳದಲ್ಲಿ ಅಳಲು ತೋಡಿಕೊಂಡಿದ್ದಾರೆ. ಬಾಗಲಕೋಟೆಯ ಗುತ್ತಿಗೆದಾರರು ಬಿಲ್ ಬಿಡುಗಡೆಗೆ ಹರಕೆ ಹೊತ್ತು ಪುಣ್ಯಸ್ನಾನ ಮಾಡಿದ ವಿಡಿಯೋ ಈಗ ವೈರಲ್ ಆಗುತ್ತಿದೆ.

ಬಾಗಲಕೋಟೆ, ಫೆಬ್ರವರಿ 5: ಕರ್ನಾಟಕದಲ್ಲಿ ಕಾಮಗಾರಿಗಳ ಬಿಲ್ ಬಾಕಿಯನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಕೆಲವು ತಿಂಗಳುಗಳಿಂದಲೂ ಕೇಳಿಬರುತ್ತಿದೆ. ಇದೀಗ ರಾಜ್ಯದ ಗುತ್ತಿಗೆ ಬಿಲ್ ಬಾಕಿ ವಿಚಾರ ಉತ್ತರ ಪ್ರದೇಶದ ಪ್ರಯಾಗ್​ಪ್ರಯಾಗ್ ರಾಜ್ ಕುಂಭಮೇಳದಲ್ಲಿಯೂ ಸದ್ದು ಮಾಡಿದೆ. ಬಾಗಲಕೋಟೆ ಮೂಲದ ಗುತ್ತಿಗೆದಾರರು ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದು, ಗುತ್ತಿಗೆ ಬಿಲ್ ಬಾಕಿ ಬಿಡುಗಡೆಯಾಗಲಿ ಎಂದು ಹರಕೆ ಹೊತ್ತಿದ್ದಾರೆ.

‘‘ಕರ್ನಾಟಕದ ಎಲ್ಲ ಗುತ್ತಿಗೆದಾರರಿಗೆ ಬಿಲ್ ಬಾಕಿ ಬಿಡುಗಡೆ ಆಗಲಿ. ಹೊಸ ಹೊಸ ಕಾಮಗಾರಿಗಳು ಆರಂಭವಾಗಲಿ. ಎಲ್ಲ ಗುತ್ತಿಗೆದಾರರ ಬಾಳು ಸಮೃದ್ಧಿಯಿಂದ ಕೂಡಿರಲಿ. ಹರ ಹರ ಮಹದೇವ್’’ ಎಂದು ಬೇಡಿಕೊಂಡು ಗುತ್ತಿಗೆದಾರರು ಪುಣ್ಯ ಸ್ನಾನ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More