ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಒಂದು ತಿಂಗಳೊಳಗೆ ಬಯೋಮೆಟ್ರಿಕ್ ಮಾಡಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಖಾತೆಗೆ 2,000 ರೂಪಾಯಿ ಹಣ ಬರುವುದು ನಿಲ್ಲಲಿದೆ. ಮೃತಪಟ್ಟವರು ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು, ಜೂನ್ 11: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಮತ್ತು ಯೋಜನೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಸಕ್ರಿಯವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
