ಉಪಯೋಗ ಇಲ್ಲ ಅಂತ ಗೊತ್ತಾದಾಗ ಕಾರ್ತಿಕ್​ಗೆ ಬೆಲೆ ಕೊಡಲಿಲ್ಲ ಸಂಗೀತಾ; ಅಸಲಿ ಮುಖ ಬಹಿರಂಗ

Updated on: Dec 21, 2023 | 3:56 PM

ಕಾರ್ತಿಕ್ ಮಹೇಶ್​ ಅವರು ಯಾರಿಗೂ ಬೇಡವಾಗಿದ್ದಾರೆ. ಅವರ ಬೆನ್ನಿಗೆ ಪೆಟ್ಟಾಗಿದೆ. ಹಾಗಾಗಿ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸ್ವತಃ ಸಂಗೀತಾ ಶೃಂಗೇರಿ ಕೂಡ ಸಿದ್ಧರಿಲ್ಲ. ಅತ್ತ, ತನಿಷಾ ಕುಪ್ಪಂಡ ಕೂಡ ಕಾರ್ತಿಕ್​ ಅವರನ್ನು ಆಯ್ಕೆ ಮಾಡಿಕೊಂಡಿಲ್ಲ. ಈ ಪರಿಸ್ಥಿತಿ ಕಂಡು ತುಕಾಲಿ ಸಂತೋಷ್​ ಮರುಕ ವ್ಯಕ್ತಪಡಿಸಿದ್ದಾರೆ.

ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಕಾರ್ತಿಕ್​ ಮಹೇಶ್​ (Karthik Mahesh) ಅವರು ಓಡುವ ಕುದುರೆ ಆಗಿದ್ದರು. ಹಾಗಾಗಿ ಅವರಿಗೆ ಒಳ್ಳೆಯ ಬೇಡಿಕೆ ಇತ್ತು. ಎರಡು ತಂಡಗಳಾಗಿ ಟಾಸ್ಕ್​ ಆಡುವಾಗ ಪ್ರತಿಯೊಬ್ಬರು ಕೂಡ ತಮ್ಮ ತಂಡದಲ್ಲಿ ಕಾರ್ತಿಕ್​ ಇರಬೇಕು ಎಂದು ಬಯಸುತ್ತಿದ್ದರು. ಆದರೆ ಈಗ ಅದೇ ಕಾರ್ತಿಕ್ ಅವರು ಯಾರಿಗೂ ಬೇಡವಾಗಿದ್ದಾರೆ. ಅವರ ಬೆನ್ನಿಗೆ ಪೆಟ್ಟಾಗಿದೆ. ಹಾಗಾಗಿ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಸ್ವತಃ ಸಂಗೀತಾ ಶೃಂಗೇರಿ (Sangeetha Sringeri) ಕೂಡ ಸಿದ್ಧರಿಲ್ಲ. ಅತ್ತ, ತನಿಷಾ ಕುಪ್ಪಂಡ ಕೂಡ ಕಾರ್ತಿಕ್​ ಅವರನ್ನು ಆಯ್ಕೆ ಮಾಡಿಕೊಂಡಿಲ್ಲ. ಈಗ ಕಾರ್ತಿಕ್​ಗೆ ಎದುರಾಗಿರುವ ಪರಿಸ್ಥಿತಿ ಕಂಡು ತುಕಾಲಿ ಸಂತೋಷ್​ ಮರುಕ ವ್ಯಕ್ತಪಡಿಸಿದ್ದಾರೆ. ‘ಇವತ್ತು ಅವನನ್ನು 10 ರೂಪಾಯಿಗೂ ಕೇಳಲಿಲ್ಲ. ಅವನಿಗೆ ಓಡೋಕೆ ಆಗಲ್ಲ ಅಂತ ಗೊತ್ತಾದ ತಕ್ಷಣ ಅವನನ್ನು ಬಿಟ್ಟೇ ಬಿಟ್ಟರು’ ಎಂದು ತುಕಾಲಿ ಹೇಳಿದ್ದಾರೆ. ಡಿ.21ರಂದು ‘ಕಲರ್ಸ್​ ಕನ್ನಡ’ದಲ್ಲಿ ಈ ಸಂಚಿಕೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More