‘ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’: ಕರೂರ್​ನಲ್ಲಿ ಪೋಸ್ಟರ್ ಹಚ್ಚಿ ವಿದ್ಯಾರ್ಥಿಗಳ ಆಕ್ರೋಶ

Updated on: Sep 29, 2025 | 12:44 PM

ತಮಿಳುನಾಡಿನ ಕರೂರ್‌ನಲ್ಲಿ ನಟ ವಿಜಯ್ ಅವರ ರ‍್ಯಾಲಿ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿದ ನಂತರ ನಟ ವಿಜಯ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ತಮಿಳುನಾಡು ಸ್ಟೂಡೆಂಟ್ಸ್ ಯೂನಿಯನ್ ಕರೂರ್ ನಗರದಾದ್ಯಂತ ಪೋಸ್ಟರ್‌ಗಳನ್ನು ಅಂಟಿಸಿ, ವಿಜಯ್ ಬಂಧನಕ್ಕೆ ಆಗ್ರಹಿಸಿದೆ. ವಿಡಿಯೋ ಇಲ್ಲಿದೆ.

ಚೆನ್ನೈ, ಸೆಪ್ಟೆಂಬರ್ 29: ತಮಿಳುನಾಡಿನ ಕರೂರ್‌ನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ ರ್ಯಾಲಿ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸುಮಾತು 41 ಜನ ಮೃತಪಟ್ಟ ವಿಚಾರವಾಗಿ ಇದೀಗ ವಿಜಯ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ದುರಂತಕ್ಕೆ ವಿಜಯ್ ಅವರೇ ನೇರ ಹೊಣೆಗಾರರು ತಮಿಳುನಾಡು ಸ್ಟೂಡೆಂಟ್ಸ್ ಯೂನಿಯನ್ ಆರೋಪಿಸಿದ್ದು, ‘ರಕ್ತ ಹರಿಸಿದ ನಟ ವಿಜಯ್ ಬಂಧಿಸಬೇಕು’ ಎಂದು ಕರೂರ್‌ನಲ್ಲಿ ಪೋಸ್ಟರ್​ಗಳನ್ನು ಅಂಟಿಸಿದೆ. ಅಲ್ಲದೆ, ವಿಜಯ್ ಬಂಧನಕ್ಕೆ ಆಗ್ರಹಿಸಿ ಅಭಿಯಾನ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published on: Sep 29, 2025 12:42 PM
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More