ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ದಿಢೀರ್​ ಕುಸಿತ: ತಪ್ಪಿದ ಭಾರೀ ಅನಾಹುತ

Edited By:

Updated on: Feb 14, 2025 | 3:35 PM

ಕಾರವಾರದ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಪರ್ಕ ಕಲ್ಪಿಸುವ ಕಾಳಿ ನದಿ ಸೇತುವೆಯ ಪಿಲ್ಲರ್ ರಾತ್ರಿ ಹೊತ್ತು ಕುಸಿದಿದೆ. ಭಾರೀ ಅನಾಹುತ ತಪ್ಪಿದೆ. ಕಳೆದ ಆಗಸ್ಟ್ 7 ರಂದು ಈ ಸೇತುವೆಯ ಭಾಗ ಈಗಾಗಲೇ ಕುಸಿದಿತ್ತು. ಹಗಲು ರಾತ್ರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪಿಲ್ಲರ್ ಕುಸಿತದಿಂದ ಉಳಿದ ಸೇತುವೆ ಅಪಾಯವಿದೆ ಎನ್ನಲಾಗುತ್ತಿದೆ.

​ಕಾರವಾರ, ಫೆಬ್ರವರಿ 14: ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ದಿಢೀರ್​ ಕುಸಿದಿರುವಂತಹ ಘಟನೆ ನಡೆದಿದೆ. ​ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸೇತುವೆ ಸಂಪರ್ಕ ಕಲ್ಪಿಸುತ್ತೆ. ರಾತ್ರಿಹೊತ್ತು ಪಿಲ್ಲರ್​ ಜಾರಿ ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದೆ. ಪಿಲ್ಲರ್ ಒಂದು ಭಾಗ ಕುಸಿದು ಬಿದ್ದರಿಂದ ಸ್ಲ್ಯಾಬ್​ ಮೇಲೆದ್ದಿದೆ. ಕಳೆದ ವರ್ಷ ಆಗಷ್ಟ್ 7 ರಂದು ಕಾಳಿ ಸೇತುವೆ ಕುಸಿತಗೊಂಡಿತ್ತು. ಸದ್ಯ ಹಗಲು, ರಾತ್ರಿ ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More