ಸಿಟಿ ರವಿ ಭಟ್ಕಳಕ್ಕೆ ಭೇಟಿ ನೀಡಿದಾಗ ಮಾಂಸದೂಟ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದರು: ಕಾರವಾರ ಕಾಂಗ್ರೆಸ್ ಕಾರ್ಯಕರ್ತ

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2023 | 1:52 PM

ಹಿಂದೆ ಸಿದ್ದರಾಮಯ್ಯನವರು ಬಾಡೂಟ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದರು ಎಂದು ದೊಡ್ಡ ವಿವಾದ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತರು ಈಗ ಮೌನವಾಗಿರೋದು ಯಾಕೆ ಅಂತ ಶೆಟ್ಟಿ ಪ್ರಶ್ನಿಸಿದ್ದಾರೆ.

ಕಾರವಾರ: ಬಿಜೆಪಿ ಶಾಸಕ ಸಿಟಿ ರವಿ (CT Ravi) ಇದ್ದಲ್ಲಿ ವಿವಾದವಿರೋದು ಇತ್ತೀಚಿಗೆ ಸಾಮಾನ್ಯವಾಗಿ ಬಿಟ್ಟಿದೆ ಮಾರಾಯ್ರೇ. ಕಾರವಾರ ಜಿಲ್ಲೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಶಂಬಿ ಶೆಟ್ಟಿಯವರು (Shambi Shetty) ಹೇಳುತ್ತಿರುವ ಪ್ರಕಾರ ಇತ್ತೀಚಿಗೆ ಸಿಟಿ ರವಿಯವರು ಮಾಂಸದೂಟ ಸೇವಿಸಿ ಕಾರವಾರದಲ್ಲಿರುವ ಹಿಂದೂ ದೇವಸ್ಥಾನವೊಂದಕ್ಕೆ ಹೋಗಿದ್ದರು. ರವಿ ಕಾರವಾರ ಜಿಲ್ಲೆಯ ಭಟ್ಕಳಕ್ಕೆ ಬಂದಾಗ ಅಲ್ಲಿನ ಶಾಸಕ ಸುನೀಲ್ ನಾಯಕ್ ಅವರ ಮನೆಯಲ್ಲಿ ಮೀನುಸಾರಿನ ಊಟಮಾಡಿದ ಬಳಿಕ ದೇವಸ್ಥಾನಕ್ಕೆ ಹೋಗಿದ್ದರು ಎಂದು ಶೆಟ್ಟಿ ಹೇಳುತ್ತಾರೆ. ಹಿಂದೆ ಸಿದ್ದರಾಮಯ್ಯನವರು (Siddaramaiah) ಬಾಡೂಟ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದರು ಎಂದು ದೊಡ್ಡ ವಿವಾದ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತರು ಈಗ ಅವರದ್ದೇ ಪಕ್ಷದ ಹಿರಿಯ ನಾಯಕನೊಬ್ಬ ಹಾಗೆ ಮಾಡಿರುವಾಗ ಮೌನವಾಗಿರೋದು ಯಾಕೆ ಅಂತ ಪ್ರಶ್ನಿಸುವ ಶೆಟ್ಟಿ ಬಿಜೆಪಿಯವರು ಹೇಳೋದು ಆಚಾರ ತಿನ್ನೋದು ಬದನೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Feb 22, 2023 01:51 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.