ಕೆಎಎಸ್ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದ ಆಕಾಂಕ್ಷಿ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 24, 2024 | 8:49 PM

ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಕೆಎಎಸ್​ ಪೂರ್ವಭಾವಿ ಪರೀಕ್ಷೆ ಅಭ್ಯರ್ಥಿಗಳು ಕಿಡಿಕಾರಿದ್ದಾರೆ. ಆ.27ರಂದು ನಿಗದಿ ಆಗಿರುವ ಕೆಎಎಸ್ ​ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ.

ಬೆಂಗಳೂರು, ಆಗಸ್ಟ್​ 24: ಆ.27ರಂದು ನಿಗದಿ ಆಗಿರುವ ಕೆಎಎಸ್ (KAS) ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ (protest). ಈ ವೇಳೆ ಮಾತನಾಡಿದ ಪರೀಕ್ಷಾ ಆಕಾಂಕ್ಷಿ, ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ವೀಕೆಂಡ್​​ ಡೇಸ್​​ನಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಭ್ರಷ್ಟಾಚಾರ ನಡೆಸಲು ಹೀಗೆ ಮಾಡಲಾಗಿದೆ. ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು  ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on