ಕೆಎಎಸ್ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದ ಆಕಾಂಕ್ಷಿ

Edited By:

Updated on: Aug 24, 2024 | 8:49 PM

ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಕೆಎಎಸ್​ ಪೂರ್ವಭಾವಿ ಪರೀಕ್ಷೆ ಅಭ್ಯರ್ಥಿಗಳು ಕಿಡಿಕಾರಿದ್ದಾರೆ. ಆ.27ರಂದು ನಿಗದಿ ಆಗಿರುವ ಕೆಎಎಸ್ ​ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ.

ಬೆಂಗಳೂರು, ಆಗಸ್ಟ್​ 24: ಆ.27ರಂದು ನಿಗದಿ ಆಗಿರುವ ಕೆಎಎಸ್ (KAS) ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ (protest). ಈ ವೇಳೆ ಮಾತನಾಡಿದ ಪರೀಕ್ಷಾ ಆಕಾಂಕ್ಷಿ, ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ವೀಕೆಂಡ್​​ ಡೇಸ್​​ನಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಭ್ರಷ್ಟಾಚಾರ ನಡೆಸಲು ಹೀಗೆ ಮಾಡಲಾಗಿದೆ. ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು  ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More