AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ

ಗಂಗಾಧರ​ ಬ. ಸಾಬೋಜಿ
|

Updated on:Apr 27, 2026 | 10:06 PM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನ ಪತ್ರ ಬಿಡುಗಡೆ ಮಾಡಲಾಯಿತು. 28 ವರ್ಷಗಳ ನಂತರ ನವೀಕರಣಗೊಂಡ ಈ ಕಟ್ಟಡ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಸ್ಮರಿಸುತ್ತದೆ.

ಬೆಂಗಳೂರು, ಏಪ್ರಿಲ್​ 27: ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ KAS ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಒಟ್ಟಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಎಸ್ ಅಧಿಕಾರಿಗಳಿಗೆ ಪ್ರಮೋಷನ್ ಸಂಬಂಧ 2 ಸಭೆಯಾಗಿದೆ. ಆದಷ್ಟು ಬೇಗ ಪ್ರಮೋಷನ್ ಆಗುತ್ತದೆ ಎಂದರು. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆ ನೀಡಿದ್ದಾರೆ. ಸಮಸ್ಯೆ ಹೇಳಿಕೊಂಡು ಜನ ನಿಮ್ಮ ಬಳಿ ಬರ್ತಾರೆ, ಸಮಾಧಾನದಿಂದ ಕೇಳಿ ಕೆಲಸ ಮಾಡಿದರೆ ರಾಜ್ಯಕ್ಕೂ ಕೀರ್ತಿ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 27, 2026 10:05 PM
Follow Us