ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್ಗೆ ಕರೆ
ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್ಗೆ ಕರೆ ನೀಡಲಾಗಿದೆ.
ಚಿಕ್ಕಮಗಳೂರು, (ಸೆಪ್ಟೆಂಬರ್ 20): ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಗಳು ಬಂದ್ಗೆ ಕರೆ ನೀಡಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೃಂಗೇರಿ ಸಂಪೂರ್ಣ ಸ್ತಬ್ಧವಾಗಲಿದೆ.
ಕರ್ನಾಕಟ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

