Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವಾರಾಧನೆಗೆ ಅಪಮಾನ ಆರೋಪ, ಧಾರಾವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ ಮಾತು

ದೈವಾರಾಧನೆಗೆ ಅಪಮಾನ ಆರೋಪ, ಧಾರಾವಾಹಿ ನಿರ್ದೇಶಕ ಪ್ರೀತಮ್ ಶೆಟ್ಟಿ ಮಾತು

ಮಂಜುನಾಥ ಸಿ.
|

Updated on:Feb 10, 2024 | 11:58 PM

Daivaradhane: ಕಾವೇರಿ ಕನ್ನಡ ಮೀಡಿಯಂ ಧಾರಾವಾಹಿಯಲ್ಲಿ ದೈವಾರಾಧನೆಗೆ ಅಪಹಾಸ್ಯ ಮಾಡಲಾಗಿದೆ ಎಂದು ದೂರು ನೀಡಲಾಗಿದ್ದು, ವಿವಾದದ ಬಗ್ಗೆ ನಿರ್ದೇಶಕ ಪ್ರೀತಮ್ ಶೆಟ್ಟಿ ಮಾತನಾಡಿದ್ದಾರೆ.

‘ಕಾವೇರಿ ಕನ್ನಡ ಮೀಡಿಯಂ’ ಧಾರವಾಹಿಯಲ್ಲಿ (Serial) ದೈವಾರಾಧನೆ ತೋರಿಸಲಾಗಿದೆ. ಆದರೆ ಇದಕ್ಕೆ ದೈವಾರಾಧಕರು ಆಕ್ಷೇಪ ವ್ಯಕ್ತಪಡಿಸಿದ್ದು, ಮಂಗಳೂರು ಇನ್ನಿತರೆ ಕಡೆಗಳಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೆ ಧಾರಾವಾಹಿ ನಿರ್ದೇಶಕ ಆರ್ ಪ್ರೀತಮ್ ಶೆಟ್ಟಿ ಮಾತನಾಡಿದ್ದು, ‘2019 ಪಿಂಗಾರ ಸಿನಿಮಾನ ನಿರ್ದೆಶನ ಮಾಡಿದ್ದೇ ಅದು ಸಂಪೂರ್ಣವಾಗಿ ಆಗಿ ದೈವಾರಾಧನೆ ಬಗ್ಗೆನೇ ಸಿನಿಮಾ ಮಾಡಲಾಗಿತ್ತು ಚಿತ್ರಕ್ಕಾಗಿ ನ್ಯಾಷನಲ್ ಅವಾರ್ಡ್ ಜೊತೆ ಸಾಕಷ್ಟು ಪ್ರಶಸ್ತಿಗಳನ್ನ ಪಡೆದಿದ್ದೇನೆ. 2016 ರಲ್ಲಿ ಮೀನಾಕ್ಷಿ ಮದುವೆ ಎಂಬ ಧಾರಾವಾಹಿಯಲ್ಲೂ ದೇವರಾಧನೆ ತೋರಿಸಿದ್ದೆ. ಆದರೆ ಅಗ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ. ನಾನು ಮಂಗಳೂರಿನವನೇ ನಮ್ಮ ಮನೆಯಲ್ಲೂ ದೇವರಾಧನೆ ನಡೆಯುತ್ತದೆ. ಈಗ ನಾವು ಆಚಾರ ವಿಚಾರ ಗಮನದಲ್ಲಿಟ್ಕೋಂಡೆ ಮಾಡಿರೋದು. ಒಂದು ವಾರ ಮಾಂಸಾಹಾರ ಸೇವಿಸಬಾರದು, ಶೂಟಿಂಗ್ ನಲ್ಲಿ ಯಾರು ಚಪ್ಪಲಿ ಹಾಕಬಾರದು ಅದನ್ನೆಲ್ಲ ಪಾಲಿಸಿದ್ದೀವಿ, ನಾವೆಲ್ಲು ದೈವದ ಅಪಹಾಸ್ಯ ಮಾಡಿಲ್ಲ. ಧಾರವಾಹಿಯಲ್ಲಿ ನಾಯಕಿ ಕೊರಗಜ್ಜನ‌ಭಕ್ತೆ ಮೊದಲಿನಿಂದಲೂ ಹೀಗಾಗಿ ಕಷ್ಟ ಬಂದಾಗ ದೈವ ಯಾವ ರೀತಿ ಪರಿಹಾರ ನೀಡುತ್ತೆ ಎಂಬ ಒಳ್ಳೆ ರೀತಿಯಲ್ಲಿ ನಾವು ತೋರಿಸಿದ್ದೇವೆ ಎಲ್ಲೂ ಅಪಹಾಸ್ಯ ಮಾಡಿಲ್ಲ. ಸೋಮವಾರ ಧಾರವಾಹಿಯ ಎಪಿಸೋಡ್ ಅನ್ನು ಪ್ರಸಾರ ಮಾಡಬೇಕೋ ಬೇಡವೋ ಎಂಬ ವಿಚಾರ ಚಾನೆಲ್ ಮುಖ್ಯಸ್ಥರದ್ದು, ಆದರೆ ಇನ್ಮುಂದೇ ನಾನು ಈ ರೀತಿಯ ದೈವರಾಧನೆ ದೃಶ್ಯಗಳನ್ನ ಮಾಡೋದಿಲ್ಲ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 10, 2024 11:56 PM