ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

Updated on: Oct 30, 2025 | 9:38 AM

ಬಿಗ್ ಬಾಸ್ ಮನೆಯಲ್ಲಿ ಜಗಳ ಯಾವಾಗ ಆರಂಭ ಆಗುತ್ತದೆ ಎಂದು ಹೇಳೋದು ಕಷ್ಟ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರುವಾಗಿದೆ. ಇದಕ್ಕೆ ಕಾರಣ ಆಗಿರೋದು ಗೌರವದ ವಿಚಾರ. ಈ ವಿಚಾರವಾಗಿ ಸ್ಪರ್ಧಿಗಳು ಕಿತ್ತಾಟ ಶುರು ಮಾಡಿರೋದು ಅಚ್ಚರಿ ಮೂಡಿಸಿದೆ.

ಸುದೀಪ್ ಅವರು ಕಳೆದ ವಾರ ಗೌರವ ಎಂಬ ವಿಚಾರದ ಬಗ್ಗೆ ಪಾಠ ಮಾಡಿದ್ದರು. ಬೇರೆಯವರಿಂದ ಗೌರವ ನಿರೀಕ್ಷೆ ಮಾಡುತ್ತೇವೆ ಎಂದರೆ ನಾವು ಮೊದಲು ಗೌರವ ಕೊಡಬೇಕು ಎಂದು ಹೇಳಿದ್ದರು. ಅಶ್ವಿನಿ ಗೌಡ ಅವರಿಗೆ ಮುಖ್ಯವಾಗಿ ಇದನ್ನು ಹೇಳಲಾಗಿತ್ತು. ಆದರೆ, ಈಗ ಈ ಪಾಠ ಮರೆತಿದ್ದಾರೆ. ಕಾವ್ಯಾಗೆ ಅವರು ಏಕವಚನದಲ್ಲೇ ಮಾತನಾಡಿಸಿದ್ದಾರೆ. ಇದು ಕಾವ್ಯಾಗೆ ಸಿಟ್ಟು ತರಿಸಿದೆ. ಈ ಕಾರಣದಿಂದ ಅಶ್ವಿನಿ ಅವರಿಗೆ ಅವರು ಏಕವಚನ ಬಳಕೆ ಮಾಡಿದ್ದಾರೆ. ಇದರಿಂದ ಅಶ್ವಿನಿ ಸಿಟ್ಟಾಗಿದ್ದಾರೆ. ಗೌರವ ಕೊಟ್ಟು ಗೌರವ ತೆಗೆದುಕೊಳ್ಳಬೇಕು ಎಂಬ ಸುದೀಪ್ ಮಾತು ಇಲ್ಲಿ ಮರೆತೇ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 30, 2025 09:37 AM
Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More