ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎನ್ನಲು ಕೋಳಿವಾಡ ಹೈಕಮಾಂಡ್ ಅಲ್ಲ: ಜಮೀರ್ ಆಹ್ಮದ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 09, 2024 | 5:45 PM

ಸಚಿವ ಸಂಪುಟದ ಸದಸ್ಯರು ಪ್ರತ್ಯೇಕ ಸಭೆಗಳನ್ನು ಮಾಡುತ್ತಿಲ್ಲ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಮನೆಗೆ ಮೈಸೂರಿಗೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಊಟಕ್ಕೆ ಹೋದರೆ ತಪ್ಪೇನೂ ಇಲ್ಲ, ಸಚಿವರು, ಶಾಸಕರು ಒಂದೆಡೆ ಸೇರೋದು ಸಾಮಾನ್ಯ ಎಂದು ಜಮೀರ್ ಅಹ್ಮದ್ ಹೇಳಿದರು.

ಬಳ್ಳಾರಿ: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲಿ ಎಂದು ಹೇಳಲು ಕೆಬಿ ಕೋಳಿವಾಡ ಪಕ್ಷದ ಹೈಕಮಾಂಡ್ ಆಗಿದ್ದಾರೆಯೇ? ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ, ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷದ ಹೈಕಮಾಂಡ್ ಅವರೊಂದಿಗಿದೆ, ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸೋನಿಯ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ ಎಂದು ಬಿಜೆಡ್ ಜಮೀರ್ ಅಹ್ಮದ್ ಖಾನ್ ಬಳ್ಳಾರಿಯಲ್ಲಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್ 

Loading...
Unable to load recommendations.
Follow Us