ರಾತ್ರೋರಾತ್ರಿ ಬೆಂಗಳೂರಿಗೆ ಬಂದ ಕೆಸಿ ವೇಣುಗೋಪಾಲ್; ಮಲ್ಲಿಕಾರ್ಜುನ ಖರ್ಗೆ ಮತ್ತು ಶಿವಕುಮಾರ್ ಜೊತೆ ಸಭೆ ನಡೆಸಿದ್ದು ಯಾಕೆ?

ಅರುಣ್​ ಕುಮಾರ್​ ಬೆಳ್ಳಿ

Updated on: Oct 16, 2023 | 12:20 PM

ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ ಅಂತ ಪತ್ರಕರ್ತರು ಅವರ ಗಮನ ಸೆಳೆದಾಗ ಶಿವಕುಮಾರ್, ಪ್ರತಿಭಟನೆ ಮಾಡಲಿ, ಅವರು ಪ್ರತಿಭಟನೆ ಮಾಡಿದಾಗಲೇ ಜನರಿಗೆ ವಿಷಯ ಗೊತ್ತಾಗೋದು, ಎಲ್ಲಾದಕ್ಕೂ ಉತ್ತರ ಕೊಡ್ತೀನಿ; ಹೈವೋಲ್ಟೇಜ್, ಲೋ ವೋಲ್ಟೇಜ್, ಲೂಟಿ ಮತ್ತು ನಕಲಿ ಎಲ್ಲ ವಿಷಯಗಳಿಗೆ ಉತ್ತರ ಕೊಡ್ತೀನಿ ಅಂತ ಶಿವಕುಮಾರ್ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದಲ್ಲಿ ಎಲ್ಲವೂ ಸರಿಯಾಗಿದೆ ತಾನೇ? ಯಾಕೆ ಇದನ್ನು ಕೇಳಬೇಕಾಗಿದೆಯೆಂದರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ರವಿವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಸದ್ಯ ಬೆಂಗಳೂರಲ್ಲೇ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರೊಂದಿಗೆ ಖರ್ಗೆ ನಿವಾಸದಲ್ಲಿ ಇಂದು ಬೆಳಗ್ಗೆ ಸಭೆಯನ್ನೂ ನಡೆಸಿದ್ದಾರೆ. ಸಭೆಯ ಉದ್ದೇಶ ಏನು ಅನ್ನೋದು ಗೊತ್ತಾಗಿಲ್ಲ. ಮೀಟಿಂಗ್ ಬಳಿಕ ಹೊರಬಂದ ಶಿವಕುಮಾರ್ ಸಹ ಅದರ ಮೇಲೆ ಬೆಳಕು ಚೆಲ್ಲಲಿಲ್ಲ. ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ತಕ್ಕ ಸಮಯದಲ್ಲಿ ಉತ್ತರ ಕೊಡುವುದಾಗಿ ಅವರು ಹೇಳುತ್ತಾರೆ. ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ ಅಂತ ಪತ್ರಕರ್ತರು ಅವರ ಗಮನ ಸೆಳೆದಾಗ ಶಿವಕುಮಾರ್, ಪ್ರತಿಭಟನೆ ಮಾಡಲಿ, ಅವರು ಪ್ರತಿಭಟನೆ ಮಾಡಿದಾಗಲೇ ಜನರಿಗೆ ವಿಷಯ ಗೊತ್ತಾಗೋದು, ಎಲ್ಲಾದಕ್ಕೂ ಉತ್ತರ ಕೊಡ್ತೀನಿ; ಹೈವೋಲ್ಟೇಜ್, ಲೋ ವೋಲ್ಟೇಜ್, ಲೂಟಿ ಮತ್ತು ನಕಲಿ ಎಲ್ಲ ವಿಷಯಗಳಿಗೆ ಉತ್ತರ ಕೊಡ್ತೀನಿ ಅಂತ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.