ಕೆಸಿಅರ್ ಮತ್ತು ಕೆಟಿಆರ್ ನನ್ನನ್ನು ಡೋಂಗಿ ಅಂತ ತೆಲಂಗಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Updated on: Nov 29, 2023 | 6:42 PM

ಪ್ರತಿಯೊಬ್ಬ ವ್ಯಕ್ತಿ ಮನುಷ್ಯತ್ವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಭಾವೈಕ್ಯತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತನ್ನಂತೆ ಬೇರೆಯವರು ಸಹ ಮನುಷ್ಯರು ಎಂಬ ಧೋರಣೆ ರೂಢಿಸಿಕೊಂಡು ದ್ವೇಷ, ಅಸೂಯೆಗಳನ್ನು ಬದಿಗಿಟ್ಟು ಸೌಹಾರ್ದತೆಯಿಂದ ಬಾಳ್ವೆ ನಡೆಸಬೇಕು ಎಂದು ಅವರು ಹೇಳಿದರು.

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮನ್ನು ಡೋಂಗಿ ಅಂತ ಹೇಳಿದ ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ (KC Chandrashekar) ಮತ್ತು ಅವರ ಮಗ ಕೆಟಿ ರಾಮರಾವ್ (KT Rama Rao) ಅವರ ವಿರುದ್ಧ ಟೀಕಾಪ್ರಹಾರ ನಡೆಸಿದರು. ರಾಜಕೀಯ ಪಕ್ಷಗಳು ಚುನಾವಣೆ ಸಮಯದಲ್ಲಿ ಜನರಿಗೆ ಭರವಸೆಗಳನ್ನು ಅಧಿಕಾರಕ್ಕೆ ಬರುತ್ತವೆ. ಆದರೆ, ಅಧಿಕಾರ ಸಿಕ್ಕ ಬಳಿಕ ನೀಡಿದ ಭರವಸೆಗಳನ್ನು ಮರೆಯಬಾರದು, ತಾವು ಜನರಿಗೆ ನೀಡಿದ್ದ 5 ಗ್ಯಾರಂಟಿಗಳ ಪೈಕಿ ನಾಲ್ಕನ್ನು ಈಗಾಗಲೇ ಜಾರಿ ಮಾಡಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ ಮಾಡಿದ್ದೇವೆಯೋ ಇಲ್ಲವೋ ಅಂತ ನೆರೆದಿದ್ದ ಜನರನ್ನು ಕೇಳಿದಾಗ ಅವರೆಲ್ಲ ಜೋರಾಗಿ ಹೌದು ಅನ್ನುತ್ತಾರೆ. ಮುಂದುವರಿದು ಮಾತಾಡಿದ ಸಿದ್ದರಾಮಯ್ಯ, ತೆಲಂಗಾಣದ ಮುಖ್ಯಮಂತ್ರಿ ಅಲ್ಲಿನ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಡೋಂಗಿ ಸರ್ಕಾರ, ಜನರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ ಅನ್ನುತ್ತಿದ್ದಾರೆ. ಅವರಿಗೆ ಕರ್ನಾಟಕಕ್ಕೆ ಬಂದು ತಮ್ಮ ಸರ್ಕಾರ ಏನು ಮಾಡಿದೆ ನೋಡುವಂತೆ ಅಮಂತ್ರಣ ನೀಡಿದ್ದರೂ ಬಂದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More