ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ
ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಜನಿವಾರ ಧರಿಸಬಾದು ಅಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿಲ್ಲ, ವೆಬ್ಸೈಟ್ನಲ್ಲಿ ಅದನ್ನು ಪರಿಶೀಲಿಸಬಹುದು, ಸಿಇಟಿಯ ಉಸ್ತುವಾರಿಯನ್ನು 20,000 ಶಿಕ್ಷಕರಿಗೆ ವಹಿಸಲಾಗಿತ್ತು, ಅದರೆ ಕಾಲೇಜಿನ ಮುಖ್ಯದ್ವಾರದ ಬಳಿಯ ಒಬ್ಬ ಸಿಬ್ಬಂದಿಯಿಂದ ಉಳಿದವರೆಲ್ಲ ನೋವು ಅನುಭವಿಸುತ್ತಿದ್ದಾರೆ, ಅಚಾತುರ್ಯ ನಡೆದಿದ್ದೇಯಾದರೆ ಪ್ರಾಧಿಕಾರದ ಪರವಾಗಿ ಮತ್ತು ವೈಯಕ್ತಿಕವಾಗಿ ತಾನು ಬ್ರಾಹ್ಮಣ ಸಮಾಜದ ಕ್ಷಮೆ ಕೋರುವುದಾಗಿ ಪ್ರಸನ್ನ ಹೇಳಿದರು.
ಬೆಂಗಳೂರು, ಏಪ್ರಿಲ್ 18: ಸಿಇಟಿ ಬರೆಯುವ ಸಂದರ್ಭದಲ್ಲಿ ಜನಿವಾರ ಧರಿಸಿದ ಕಾರಣ ಪರೀಕ್ಷೆಯಲ್ಲಿ ಕೂರಲು ಅನುಮತಿ ನೀಡದ ಎರಡು ಘಟನೆಗಳ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ (H Prasanna, Executive Director, KEA) ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಇಟಿಗಾಗಿ ರಾಜ್ಯಾದ್ಯಂತ 775 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿತ್ತು, ಅವುಗಳ ಪೈಕಿ ಶಿವಮೊಗ್ಗ ಮತ್ತು ಬೀದರ್ ನಗರಗಳಲ್ಲಿನ ಕಾಲೇಜುಗಳಲ್ಲಿ ಈ ಹುಚ್ಚುತನ ನಡೆದಿದೆ, ಶಿವಮೊಗ್ಗದಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಆರಂಭವಾಗಿ 10 ನಿಮಿಷ ಕಳೆದ ಮೇಲೆ ಬರೆಯುವ ಅನುಮತಿ ನೀಡಲಾಗಿದ್ದರೆ ಬೀದರ್ ನಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಿಂದ ವಾಪಸ್ಸು ಕಳಿಸಲಾಗಿದೆ. ಕೆಇಎ ಎಲ್ಲ ಜಿಲ್ಲಾಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ನೀಡಿರುತ್ತದೆ, ಇದು ಅವರ ಹೊಣೆಗಾರಿಕೆ, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಅವರೇ ಕ್ರಮ ಜರುಗಿಸಬಹುದು ಇಲ್ಲವೇ ಸರ್ಕಾರಕ್ಕೆ ಶಿಫಾರಸ್ಸು ಮಾಡಬಹುದು ಎಂದು ಪ್ರಸನ್ನ ಹೇಳಿದರು.
ಇದನ್ನೂ ಓದಿ: ಸಿಇಟಿ ಪರೀಕ್ಷೆ ಎದುರಲ್ಲಿ ಪಿಯು ಫಲಿತಾಂಶ – ಖಾಸಗಿ ಶಿಕ್ಷಣ ಲಾಬಿಗೆ ಮಣಿದ ಸರಕಾರ?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

