AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇದಾರನಾಥ ಧಾಮಕ್ಕೆ ಹೋಗುವಾಗ ತಾಂತ್ರಿಕ ದೋಷದಿಂದ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್

ಕೇದಾರನಾಥ ಧಾಮಕ್ಕೆ ಹೋಗುವಾಗ ತಾಂತ್ರಿಕ ದೋಷದಿಂದ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್

ಸುಷ್ಮಾ ಚಕ್ರೆ
|

Updated on: Jun 07, 2025 | 3:52 PM

Share

ಉತ್ತರಾಖಂಡದ ಗುಪ್ತ್ ಕಾಶಿ ಪ್ರದೇಶದಲ್ಲಿ ಹೆಲಿಕಾಪ್ಟರ್ ಘಟನೆಯೊಂದು ಪೈಲಟ್ ತಾಂತ್ರಿಕ ದೋಷವನ್ನು ಅನುಭವಿಸಿ ಹತ್ತಿರದ ಹೆಲಿಪ್ಯಾಡ್ ಬದಲಿಗೆ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ಮೇ 8ರಂದು ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾಗೀರಥಿ ನದಿಯ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ 6 ಜನರು ಸಾವನ್ನಪ್ಪಿದ್ದರು. ಇಬ್ಬರು ಗಾಯಗೊಂಡಿದ್ದರು. 

ಪ್ರಯಾಗ್​ರಾಜ್, ಜೂನ್ 7: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಇಂದು ಖಾಸಗಿ ಹೆಲಿಕಾಪ್ಟರ್ ರಸ್ತೆಯ ಮಧ್ಯದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿದೆ. ಆ ಹೆಲಿಕಾಪ್ಟರ್ (Helicopter) ರೆಕ್ಕೆ ತಾಗಿ ಪಕ್ಕದಲ್ಲಿ ನಿಲ್ಲಿಸಿದ್ದ ಕಾರನ್ನು ಪುಡಿಪುಡಿ ಮಾಡಿತು. ಗುಪ್ತ್ ಕಾಶಿ ಪ್ರದೇಶದಲ್ಲಿ ಪೈಲಟ್ ತಾಂತ್ರಿಕ ದೋಷವನ್ನು ವೀಕ್ಷಿಸಿದ ನಂತರ ಈ ಘಟನೆ ನಡೆದಿದೆ. ಇದರಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿತು. ಪೈಲಟ್ ಸೇರಿದಂತೆ ಚಾಪರ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಹೆಲಿಕಾಪ್ಟರ್​​ನ ರೆಕ್ಕೆ ಡಿಕ್ಕಿ ಹೊಡೆದ ಕಾರು ಹಾನಿಗೊಳಗಾಗಿದೆ. ಆದರೆ, ಅಪಘಾತದ ಸಮಯದಲ್ಲಿ ಅದರೊಳಗೆ ಯಾರೂ ಇರಲಿಲ್ಲ. ಕೇದಾರನಾಥ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಹೆಲಿಕಾಪ್ಟರ್ ಪ್ರಯಾಣಿಸುತ್ತಿತ್ತು.

ಮೇ 8ರಂದು ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾಗೀರಥಿ ನದಿಯ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ 6 ಜನರು ಸಾವನ್ನಪ್ಪಿದ್ದರು. ಇಬ್ಬರು ಗಾಯಗೊಂಡಿದ್ದರು. ಏರೋಟ್ರಾನ್ಸ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುವ ಹೆಲಿಕಾಪ್ಟರ್ 200ರಿಂದ 250 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ ಎಂದು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us