ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ

Updated on: Sep 03, 2025 | 6:25 PM

ರುದ್ರಪ್ರಯಾಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಕೇದಾರನಾಥ ದೇಗುಲಕ್ಕೆ ಹೋಗುವ ಮಾರ್ಗದಲ್ಲಿರುವ ಸೋನ್‌ಪ್ರಯಾಗದಲ್ಲಿರುವ ಮುಖ್ಯ ಶಟಲ್ ಕಾರು ನಿಲ್ದಾಣವು ಭೂಕುಸಿತಕ್ಕೆ ಒಳಗಾಗಿದ್ದು, ಇದು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಇಲ್ಲಿ ನಿಲ್ಲಿಸಲಾಗಿದ್ದ ಹಲವಾರು ವಾಹನಗಳು ಭಾಗಶಃ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ. ಅದೃಷ್ಟವಶಾತ್ ಈ ಘಟನೆಯ ಸಮಯದಲ್ಲಿ, ಪಾರ್ಕಿಂಗ್ ಪ್ರದೇಶದಲ್ಲಿದ್ದ ಎಲ್ಲ ಜನರನ್ನು ಸಮಯಕ್ಕೆ ಸರಿಯಾಗಿ ಸ್ಥಳಾಂತರಿಸಲಾಯಿತು. ಇದರಿಂದ ಯಾವುದೇ ದೊಡ್ಡ ಪ್ರಮಾಣದ ಸಾವುನೋವುಗಳು ಉಂಟಾಗಿಲ್ಲ.

ಕೇದಾರನಾಥ, ಸೆಪ್ಟೆಂಬರ್ 3: ಕೇದಾರನಾಥ ದೇವಸ್ಥಾನಕ್ಕೆ (Kedarnath Temple) ಭೇಟಿ ನೀಡುವ ಯಾತ್ರಿಕರಿಗೆ ನಿರ್ಣಾಯಕ ಮಾರ್ಗವಾದ ಸೋನ್‌ಪ್ರಯಾಗ-ಗೌರಿಕುಂಡ್ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಶಟಲ್ ಪಾರ್ಕಿಂಗ್ ಸೌಲಭ್ಯದ ಭಾಗವು ಭೂಕುಸಿತದಲ್ಲಿ ಸಿಲುಕಿಕೊಂಡಿದ್ದು, ಅಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದೆ. ಇಲ್ಲಿ ನಿಲ್ಲಿಸಲಾಗಿದ್ದ ಹಲವಾರು ವಾಹನಗಳು ಭಾಗಶಃ ಅವಶೇಷಗಳ ಅಡಿಯಲ್ಲಿ ಹೂತುಹೋಗಿವೆ. ಅದೃಷ್ಟವಶಾತ್ ಈ ಘಟನೆಯ ಸಮಯದಲ್ಲಿ, ಪಾರ್ಕಿಂಗ್ ಪ್ರದೇಶದಲ್ಲಿದ್ದ ಎಲ್ಲ ಜನರನ್ನು ಸಮಯಕ್ಕೆ ಸರಿಯಾಗಿ ಸ್ಥಳಾಂತರಿಸಲಾಯಿತು. ಇದರಿಂದ ಯಾವುದೇ ದೊಡ್ಡ ಪ್ರಮಾಣದ ಸಾವುನೋವುಗಳು ಉಂಟಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ