ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾಗಿ, ಮೂವರು ಕಾಲೇಜು ವಿದ್ಯಾರ್ಥಿಗಳು ಸಾವು

Updated on: Feb 20, 2025 | 1:54 PM

ತಿರುವನಂತಪುರಂ, ಫೆಬ್ರವರಿ 20: ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನವರು . ಪ್ರಸಿದ್ಧ ಪ್ರವಾಸಿ ತಾಣವಾದ ಎಕೋ ಪಾಯಿಂಟ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ವೆನಿಕಾ ಆರ್, ಅತಿಕಾ ಆರ್ ಮತ್ತು ಸುಧನ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿರುವ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ತಿರುವನಂತಪುರಂ, ಫೆಬ್ರವರಿ 20: ಕೇರಳದ ಮುನ್ನಾರ್​ನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನವರು . ಪ್ರಸಿದ್ಧ ಪ್ರವಾಸಿ ತಾಣವಾದ ಎಕೋ ಪಾಯಿಂಟ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ವೆನಿಕಾ ಆರ್, ಅತಿಕಾ ಆರ್ ಮತ್ತು ಸುಧನ್ ಎಂದು ಗುರುತಿಸಲಾಗಿದ್ದು, ತಮಿಳುನಾಡಿನ ನಾಗರ್‌ಕೋಯಿಲ್‌ನಲ್ಲಿರುವ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

37 ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಒಳಗೊಂಡ ಈ ಗುಂಪು ಮಂಗಳವಾರ ರಾತ್ರಿ ನಾಗರಕೋಯಿಲ್‌ನಿಂದ ಹೊರಟು ಬುಧವಾರ ಮುಂಜಾನೆ ಮುನ್ನಾರ್ ತಲುಪಿತ್ತು. ಜನಪ್ರಿಯ ಪ್ರವಾಸಿ ತಾಣವಾದ ಕುಂಡಲ ಅಣೆಕಟ್ಟಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ತಿರುವು ಪಡೆಯುವ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಿಂದ ಹೊರಟು ಪಕ್ಕಕ್ಕೆ ಪಲ್ಟಿಯಾಗಿದೆ.

19 ಜನರನ್ನು ಮುನ್ನಾರ್‌ನ ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ನಾಲ್ವರು ಗಂಭೀರವಾಗಿ ಗಾಯಗೊಂಡವರನ್ನು ಥೇಣಿ, ಕೊಲೆಂಚೇರಿ ಮತ್ತು ಕೊಟ್ಟಾಯಂನ ವೈದ್ಯಕೀಯ ಕಾಲೇಜುಗಳಿಗೆ ಸ್ಥಳಾಂತರಿಸಲಾಯಿತು. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಊಹಿಸಿದ್ದರೂ, ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More