ವಯನಾಡನ್ನು ಬೆಚ್ಚಿಬೀಳಿಸಿದ ಭೂಕುಸಿತ; ರಾತ್ರಿ ಬೆಳಗಾಗುವುದರೊಳಗೆ ಎಲ್ಲ ನೆಲಸಮ

ಭಾರೀ ಮಳೆಯ ರಾತ್ರಿಯಲ್ಲಿ ಏನಾಯಿತು ಎಂದು ಯಾರಿಗೂ ಅರ್ಥವಾಗಲಿಲ್ಲ. ಅವರು ಆಘಾತದಿಂದ ಎಚ್ಚರಗೊಂಡಾಗ, ಅನೇಕ ಜನರು ಮಣ್ಣಿನಲ್ಲಿ ಹೂತು ಹೋಗಿದ್ದರು. 2:30ಕ್ಕೆ ಭೂಕುಸಿತದ ಬಗ್ಗೆ ಜನರಿಗೆ ಗೊತ್ತಾಗಿದ್ದು. ಭಾರೀ ಮಳೆ ಮತ್ತು ಕತ್ತಲೆಯಿಂದಾಗಿ, ಏನಾಯಿತು ಅಥವಾ ಅನಾಹುತದ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ

ವಯನಾಡನ್ನು ಬೆಚ್ಚಿಬೀಳಿಸಿದ ಭೂಕುಸಿತ; ರಾತ್ರಿ ಬೆಳಗಾಗುವುದರೊಳಗೆ ಎಲ್ಲ ನೆಲಸಮ
|

Updated on: Jul 30, 2024 | 4:28 PM

ಮಧ್ಯರಾತ್ರಿ ಕುಸಿದ ಗುಡ್ಡ, ಜತೆಗೆ ಜೋರು ಮಳೆ… ಕೇರಳದ ವಯನಾಡಿನ ಚೂರಲ್​​ಮಲದಲ್ಲಿ ಕೇಳಿಸಿದ್ದು ಜನರ ಆಕ್ರಂದನ. ರಾತ್ರಿ ಬೆಳಗಾಗುವುದರೊಳಗೆ ಇಡೀ ಭೂಪ್ರದೇಶವೇ ಮಣ್ಣಿನಡಿಯಲ್ಲಿತ್ತು. ‘ಯಾರಾದರೂ ಬಂದು ಕಾಪಾಡಿ, ಉಸಿರಾಡಲು ಆಗುತ್ತಿಲ್ಲ, ನೆಲದಡಿಯಲ್ಲಿ ಇದ್ದೇವೆ’ ಹಲವಾರು ಮಂದಿ ಕೂಗುತ್ತಿದ್ದರು. ಇನ್ನೊಂದೆಡೆ ತಮ್ಮ ಕುಟುಂಬ ಸದಸ್ಯರನ್ನು ಕಾಪಾಡಲು ಹೆಣಗಾಡುವ ಮನುಷ್ಯರು.
“ಯಾರಾದರೂ ಓಡಿ ಬನ್ನಿ, ನಾವು ನಮ್ಮ ಮನೆಗೆ ಹೋಗಿ ನಮ್ಮೊಂದಿಗೆ ಇರುವವರನ್ನು ಕಾಪಾಡಲು ಸಾಧ್ಯವಾಗುತ್ತಿಲ್ಲ. ಅವರು ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ. ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ, ಹೇಗಾದರೂ ಮಾಡಿ ಅವರನ್ನು ಉಳಿಸಬೇಕು ಎಂದು ಗೃಹಿಣಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಭಾರೀ ಮಳೆಯ ರಾತ್ರಿಯಲ್ಲಿ ಏನಾಯಿತು ಎಂದು ಯಾರಿಗೂ ಅರ್ಥವಾಗಲಿಲ್ಲ. ಅವರು ಆಘಾತದಿಂದ ಎಚ್ಚರಗೊಂಡಾಗ, ಅನೇಕ ಜನರು ಮಣ್ಣಿನಲ್ಲಿ ಹೂತು ಹೋಗಿದ್ದರು. 2:30ಕ್ಕೆ ಭೂಕುಸಿತದ ಬಗ್ಗೆ ಜನರಿಗೆ ಗೊತ್ತಾಗಿದ್ದು. ಭಾರೀ ಮಳೆ ಮತ್ತು ಕತ್ತಲೆಯಿಂದಾಗಿ, ಏನಾಯಿತು ಅಥವಾ ಅನಾಹುತದ ಪ್ರಮಾಣವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅಲ್ಲಿದ್ದದ್ದು ಕೆಸರು, ಕೊಚ್ಚಿ ಹೋಗುತ್ತಿದ್ದ ಮೃತದೇಹಗಳು ಮತ್ತು ಬರೀ ನೀರು ಮಾತ್ರ!.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​