ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಬಳಿಯ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದಲ್ಲಿ ಪೂಮಾರುತನ್ ದೇವರ 'ವೆಲ್ಲಟ್ಟಂ' ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತೆಯ್ಯಂ ಎಂಬುದು ಕೇರಳದ ಒಂದು ಧಾರ್ಮಿಕ ವಿಧಿವಿಧಾನದ ರೂಪ. ಇದರದಲ್ಲಿ ಪ್ರದರ್ಶಕರು ಸಾಂಪ್ರದಾಯಿಕವಾಗಿ ಒಂದು ಕೈಯಲ್ಲಿ ಕತ್ತಿ ಮತ್ತು ಇನ್ನೊಂದು ಕೈಯಲ್ಲಿ ಮರದ ಗುರಾಣಿಯನ್ನು ಹಿಡಿದಿರುತ್ತಾರೆ. ಈ ಪ್ರದರ್ಶನವನ್ನು ಗುರಾಣಿಯನ್ನು ತಿರುಗಿಸುವುದು ಮತ್ತು ಕತ್ತಿಯನ್ನು ಬೀಸುವ ಬಿರುಸಾದ ಚಲನೆಗಳ ಮೂಲಕ ಮಾಡಲಾಗುತ್ತದೆ.
ಕಾಸರಗೋಡು, ಡಿಸೆಂಬರ್ 15: ಕಾಸರಗೋಡಿನ ನೀಲೇಶ್ವರದಲ್ಲಿ ತೆಯ್ಯಂ ಪ್ರದರ್ಶಕ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮವಾಗಿ ಯುವಕ ಕುಸಿದು ಬಿದ್ದ ಘಟನೆ ನಡೆದಿದೆ. ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಬಳಿಯ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದಲ್ಲಿ ಪೂಮಾರುತನ್ ದೇವರ ‘ವೆಲ್ಲಟ್ಟಂ’ ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತೆಯ್ಯಂ ಎಂಬುದು ಕೇರಳದ (Kerala) ಒಂದು ಧಾರ್ಮಿಕ ಹಾಗೂ ಜಾನಪದ ಮಿಶ್ರಣವಾದ ನೃತ್ಯ ಪ್ರಕಾರ. ಇದರಲ್ಲಿ ಪ್ರದರ್ಶಕರು ಸಾಂಪ್ರದಾಯಿಕವಾಗಿ ಒಂದು ಕೈಯಲ್ಲಿ ಕತ್ತಿ ಮತ್ತು ಇನ್ನೊಂದು ಕೈಯಲ್ಲಿ ಮರದ ಗುರಾಣಿಯನ್ನು ಹಿಡಿದಿರುತ್ತಾರೆ. ಈ ಪ್ರದರ್ಶನವನ್ನು ಗುರಾಣಿಯನ್ನು ತಿರುಗಿಸುವುದು ಮತ್ತು ಕತ್ತಿಯನ್ನು ಬೀಸುವ ಬಿರುಸಾದ ಚಲನೆಗಳ ಮೂಲಕ ಮಾಡಲಾಗುತ್ತದೆ. ಈ ವೇಳೆ ತೆಯ್ಯಂ ಪ್ರದರ್ಶಕ ಅಲ್ಲಿ ನೆರೆದಿದ್ದ ಪ್ರೇಕ್ಷಕರಲ್ಲಿ ಒಬ್ಬ ಹುಡುಗನಿಗೆ ಗುರಾಣಿಯಿಂದ ಹೊಡೆದಿದ್ದಾರೆ. ಇದರಿಂದ ಆತ ತಕ್ಷಣವೇ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಜೀವಕ್ಕೇನೂ ತೊಂದರೆಯಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSLನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

