Yuvam-23: ಕೇರಳದ ಯುವಕರು ರಾಜ್ಯದ ಎಲ್ಲ ಮಹಾನ್ ವ್ಯಕ್ತಿಗಳಿಂದ ಪ್ರೇರಣೆ ಪಡೆಯಬೇಕು: ಪ್ರಧಾನ ಮಂತ್ರಿ ನರೇಂದ್ರ ಮೋದಿ

Updated on: Apr 25, 2023 | 4:31 PM

ಇಂದು ಅಯೋಜಿಸಲಾದ ಯುವಂ-23 ಕಾರ್ಯ್ರಮದಲ್ಲಿ ಭಾಗವಹಿಸಿ ಮಾತಾಡಿದ ಪ್ರಧಾನಿ ಮೋದಿಯವರು ನೆರೆದಿದ್ದ ಯುವಕರನ್ನು ಮೊದಲಿಗೆ ಮಲೆಯಾಳಂ ಭಾಷೆಯಲ್ಲಿ ಸಂಬೋಧಿಸಿದರು.

ಕೊಚ್ಚಿ (ಕೇರಳ): ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವುದೇ ರಾಜ್ಯಕ್ಕೆ ಹೋದರೂ ಅಲ್ಲಿನ ಜನರನ್ನು ಅವರ ಭಾಷೆಯಲ್ಲಿ ನಮಸ್ಕರಿಸುತ್ತಾರೆ. ನಗರದಲ್ಲಿ ಇಂದು ಅಯೋಜಿಸಲಾದ ಯುವಂ-23 ಕಾರ್ಯ್ರಮದಲ್ಲಿ ಭಾಗವಹಿಸಿ ಮಾತಾಡಿದ ಪ್ರಧಾನಿ ಮೋದಿಯವರು ನೆರೆದಿದ್ದ ಯುವಕರನ್ನು ಮೊದಲಿಗೆ ಮಲೆಯಾಳಂ ಭಾಷೆಯಲ್ಲಿ ಸಂಬೋಧಿಸಿದರು. ಯುವಕರನ್ನು ಉದ್ದೇಶಿಸಿ ಮಾತಾಡುವಾಗ ಅವರು ಕೇರಳದ ಎಲ್ಲ ಮಹಾನ್ ನಾಯಕರು, ವಿದ್ವಾಂಸರು, ದಾರ್ಶನಿಕರು ಮಲೆಯಾಳಿ ಯುವಕರಿಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು. ಕೇರಳದಲ್ಲಿ ಬದಲಾವಣೆಯ ಗಾಳಿ ಬೀಸಲು ಕಾರಣವಾಗುತ್ತಿರುವ ಯುವಜನತೆಯನ್ನು ಪ್ರಧಾನಿ ಮೋದಿ ಅಭಿನಂದಿಸಿದರು. ಇತ್ತೀಚಿಗೆ ಪದ್ಮಶ್ರೀ ಪ್ರಶಸ್ತಿಯಿಂದ ಸನ್ಮಾನಿತರಾದ ಕೇರಳದ 99-ವರ್ಷ ವಯಸ್ಸಿನ ಗಾಂಧಿವಾದಿ ವಿಪಿ ಅಪ್ಪುಕುಟ್ಟನ್ ಪೊದುವಾಳ್ ಅವರನ್ನು 99ರ ಯುವಕ ಎಂದು ಉಲ್ಲೇಖಿಸಿದ ಪ್ರಧಾನಿಯವರು, ವಯಸ್ಸಿನ ತಾರತಮ್ಯ ಮಾಡದೆ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಭೆಯನ್ನು ಗುರುತಿಸುತ್ತದೆ ಎಂದು ಹೇಳಿದರು. ಆದಿ ಶಂಕರನ್, ಶ್ರೀನಾರಾಯಣ ಮೊದಲಾದವರು ಸೇರಿದಂತೆ ಕೇರಳದ ಎಲ್ಲ ಮಹಾನ್ ವ್ಯಕ್ತಿಗಳನ್ನು ಪ್ರಧಾನಿ ಈ ಸಂದರ್ಭದಲ್ಲಿ ಸ್ಮರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 25, 2023 04:31 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More