AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ

ಮದನ್​ ಕುಮಾರ್​
|

Updated on: May 22, 2026 | 10:35 PM

Share

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ. ಪ್ಯಾನ್ ಇಂಡಿಯಾ, ಎಐ ಕುರಿತ ಸಮಸ್ಯೆಗಳು ಸಹ ಎದುರಾಗಿವೆ. ಹಳೇ ನಿರ್ಮಾಪಕರು ಸಿನಿಮಾ ಮಾಡುತ್ತಿಲ್ಲ. ಆ ಬಗ್ಗೆ ಚಿಂತನ ಮಂಥನ ಆಗಬೇಕಿದೆ. ಹಾಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ’ ಎಂದು ಜಯಮಾಲಾ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More