ನಾನ್ಯಾಕೆ ಡಿಕೆ ಶಿವಕುಮಾರ್ ಪರ್ಮಿಷನ್ ಕೇಳಲೀ? ನಾನು ತಪ್ಪು ಮಾಡಿಲ್ಲ-ಕೆಪಿಸಿಸಿ ಶಿಸ್ತು ಸಮಿತಿ ನೊಟೀಸ್ ಬಗ್ಗೆ ಕೆಜಿಎಫ್ ಬಾಬು ಪ್ರತಿಕ್ರಿಯೆ

Edited By:

Updated on: Aug 25, 2022 | 5:30 PM

ಕೆಪಿಸಿಸಿ ಶಿಸ್ತು ಸಮಿತಿಯಿಂದ ನೊಟೀಸ್ ನೀಡಿರುವ ಸಂಬಂಧ ನವದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಶಿಸ್ತು ಸಮಿತಿಯಿಂದ ನೊಟೀಸ್ ನೀಡಿರುವ ಸಂಬಂಧ ನವದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಶಿಸ್ತು ಕ್ರಮ ಜರುಗಿಸುವಂತ ತಪ್ಪು ನಾನು ಏನ್ ಮಾಡಿದ್ನೋ ಗೊತ್ತಿಲ್ಲ ಎಂದಿದ್ದಾರೆ.

ಕೆಪಿಸಿಸಿ ಶಿಸ್ತು ಸಮಿತಿಯಿಂದ ಕೆಜಿಎಫ್ ಬಾಬುಗೆ ನೋಟಿಸ್: ಪಕ್ಷದ ಹೆಸರಿಗೆ ಮಸಿ ಬಳಿದಂತಾಗಿದೆ ಎಂದು ಆಕ್ರೋಶ

ಬೆಂಗಳೂರು: ಕೆಜಿಎಫ್ ಬಾಬುಗೆ(KGF Babu) ಕೆಪಿಸಿಸಿ(KPCC) ನೋಟಿಸ್ ನೀಡಿದೆ. ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಕೆಜಿಎಫ್ ಬಾಬು ಹೇಳಿಕೆ ನೀಡಿದ್ದರು. ಹಾಗೂ ಚಿಕ್ಕಪೇಟೆ ಕ್ಷೇತ್ರಕ್ಕೆ ಸಂಬಂಧಿಸಿ 350 ಕೋಟಿ ಯೋಜನೆ ರೂಪಿಸುವಂತೆ ಕರೆ ನೀಡಿದ್ದರು. ಇದರಿಂದ ಪಕ್ಷದ ಹೆಸರಿಗೆ ಮಸಿ ಬಳಿದಂತಾಗಿದೆ ಎಂದು ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ.

Published on: Aug 25, 2022 05:26 PM
Follow Us
Web contact

TV9 Kannada

Read More