‘ಕೆಜಿಎಫ್​: ಚಾಪ್ಟರ್​ 2’ ರಿಲೀಸ್​ ಹೊಸ್ತಿಲಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವರ ದರ್ಶನ ಪಡೆದ ಯಶ್​

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಶ್​ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅವರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋ ಇಲ್ಲಿದೆ..

‘ಕೆಜಿಎಫ್​: ಚಾಪ್ಟರ್​ 2’ ರಿಲೀಸ್​ ಹೊಸ್ತಿಲಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವರ ದರ್ಶನ ಪಡೆದ ಯಶ್​
| Updated By: ಮದನ್​ ಕುಮಾರ್​

Updated on: Apr 10, 2022 | 1:29 PM

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಏ.14ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಕನ್ನಡ, ತೆಲುಗು, ಮಲಯಾಳಂ, ಹಿಂದಿ, ತಮಿಳು ಭಾಷೆಗಳಲ್ಲಿ ಬಿಡುಗಡೆ ಆಗಲಿರುವ ‘ಕೆಜಿಎಫ್​ 2’ ಚಿತ್ರವನ್ನು ನೋಡಲು ದೇಶಾದ್ಯಂತ ಇರುವ ಯಶ್​ (Yash) ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಬೇಕು ಎಂಬುದು ಎಲ್ಲರ ಆಶಯ. ಈ ಸಂದರ್ಭದಲ್ಲಿ ಯಶ್​ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ದೇವಸ್ಥಾನಕ್ಕೆ ಅವರು ಭಾನುವಾರ (ಏ.10) ತೆರಳಿ ಪೂಜೆ ಸಲ್ಲಿಸಿದ್ದಾರೆ. ಅವರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಯಶ್​ ಆಗಮನದ ಹಿನ್ನೆಲೆಯಲ್ಲಿ ಪೊಲೀಸ್​ ಬಿಗಿ ಭದ್ರತೆ ಒದಗಿಸಲಾಗಿತ್ತು. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗೆ ಪ್ರಶಾಂತ್​ ನೀಲ್​ ನಿರ್ದೇಶನ ಮಾಡಿದ್ದು, ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ವಿಜಯ್​ ಕಿರಗಂದೂರು ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:

ಯಶ್​ ಮಾತ್ರವಲ್ಲ, ಫ್ಯಾನ್ಸ್​ ಕೂಡ ಮಾಡ್ತಿದ್ದಾರೆ ದಾಖಲೆ; ಸಿದ್ಧವಾಗ್ತಿದೆ ಅತಿ ದೊಡ್ಡ ಮೊಸಾಯಿಕ್​ ಪೋಟ್ರೇಟ್

ಯಶ್​, ಪ್ರಶಾಂತ್​ ಅವರನ್ನು ಸಂದರ್ಶನ ಮಾಡಿದ ಬಾಲಿವುಡ್​ ಸ್ಟಾರ್​ ನಟ; ಇಲ್ಲಿದೆ ವಿಡಿಯೋ

Follow us