‘ಕೆಜಿಎಫ್: ಚಾಪ್ಟರ್ 2’ ಟ್ರೇಲರ್ ಬಿಡುಗಡೆಗೂ ಮುನ್ನ ಶುಭ ಸೂಚನೆ ನೀಡಿದ ಕೆಂಗಲ್ ಆಂಜನೇಯ ಸ್ವಾಮಿ
KGF 2 Trailer: ಯಶ್ ಅಭಿಮಾನಿಗಳು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಯಶಸ್ಸಿಗಾಗಿ ಪೂಜೆ ಸಲ್ಲಿಸುತ್ತಿದ್ದಾರೆ. ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಆರಂಭ ಆಗಿರುವಾಗ ವಿವಿಧ ದೇವಾಲಯಗಳಲ್ಲಿ ಪೂಜೆ ನೆರವೇರಿಸಲಾಗಿದೆ.
ಸಿನಿಪ್ರಿಯರ ವಲಯದಲ್ಲಿ ‘ಕೆಜಿಎಫ್: ಚಾಪ್ಟರ್ 2’ (KGF Chapter 2) ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಆಗಿದೆ. ಯಶ್ (Yash) ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಪ್ರಚಾರ ಕಾರ್ಯ ಆರಂಭ ಆಗಿದ್ದು, ಇಂದು (ಮಾ.27) ಟ್ರೇಲರ್ ಬಿಡುಗಡೆ ಮಾಡಲಾಗುತ್ತಿದೆ. ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಟ್ರೇಲರ್ (KGF Chapter 2 Trailer) ಸೂಪರ್ ಹಿಟ್ ಆಗಲಿ ಎಂದು ಅಭಿಮಾನಿಗಳು ಅನೇಕ ಕಡೆಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ವಿವಿಧ ದೇವಾಲಯಗಳಲ್ಲಿ ಫ್ಯಾನ್ಸ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಮಾಡುವಾಗ ಬಲಗಡೆಯಿಂದ ಹೂವು ಪ್ರಸಾದವಾಗಿ ಸಿಕ್ಕಿದೆ. ಈ ಶುಭ ಸೂಚನೆಯಿಂದ ಯಶ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಬೆಂಗಳೂರಿನಲ್ಲಿ ಟ್ರೇಲರ್ ರಿಲೀಸ್ ಆಗುತ್ತಿದ್ದು, ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ವಿವಿಧ ಭಾಷೆಯ ಸ್ಟಾರ್ ನಟರು ಸೋಶಿಯಲ್ ಮೀಡಿಯಾ ಮೂಲಕ ಆಯಾ ಭಾಷೆಯ ಟ್ರೇಲರ್ ಲಾಂಚ್ ಮಾಡಲಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ಪ್ರಕಾಶ್ ರೈ, ರವೀನಾ ಟಂಡನ್ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ:
Karan Johar: ‘ಕೆಜಿಎಫ್ 2’ ಟ್ರೇಲರ್ ರಿಲೀಸ್ಗೆ ಬರ್ತಿದ್ದಾರೆ ಸ್ಟಾರ್ ನಿರೂಪಕ ಕರಣ್ ಜೋಹರ್; ಏನು ಇವರ ವಿಶೇಷ?
‘ತೂಫಾನ್’ ಅವತಾರದಲ್ಲಿ ಬಂದ ಯಶ್; ‘ಕೆಜಿಎಫ್ 2’ ಮೇಲಿನ ಕಾತರಕ್ಕೆ ಕಿಚ್ಚು ಹೊತ್ತಿಸಿವೆ ಈ ಲುಕ್ಗಳು
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

