To mount pressure: ಕೇಂದ್ರ ಆಹಾರ ಸಚಿವ ಪಿಯುಷ್ ಗೋಯೆಲ್ ಜೊತೆ ಕೆಹೆಚ್ ಮುನಿಯಪ್ಪ ನಾಳೆ ಮಾತುಕತೆ

ಅರುಣ್​ ಕುಮಾರ್​ ಬೆಳ್ಳಿ

Updated on: Jun 20, 2023 | 5:30 PM

ಸಚಿವರು ಹೇಳುವ ಪ್ರಕಾರ, ಎಫ್ ಸಿಐನಲ್ಲಿ 7 ಲಕ್ಷಟನ್ ಅಕ್ಕಿ ದಾಸ್ತಾನು ಇದ್ದು ರಾಜ್ಯಕ್ಕೆ ಅವಶ್ಯಕತೆ ಇರೋದು 2.28 ಲಕ್ಷ ಟನ್.

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ಹೊಂದಿಸಲು ರಾಜ್ಯ ಸರ್ಕಾರ ಕಸರತ್ತು ಮುಂದುವರಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಅವರಿಗೆ ದೆಹಲಿಗೆ ತೆರಳಿ ಕೇಂದ್ರ ಗ್ರಾಹಕ ಸೇವೆಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪಿಯುಷ್ ಗೋಯಲ್ (Piyush Goyal) ಭೇಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಸೂಚಿಸಿದ್ದು ಸಚಿವರು ನಾಳೆ ದೆಹಲಿಗೆ ಪಯಣಿಸಲಿದ್ದಾರೆ. ಒಡಿಶಾ, ಛತ್ತೀಸ್ ಗಢ್, ತೆಲಂಗಾಣ ಮತ್ತು ಆಂದ್ರಪ್ರದೇಶ ಮೊದಲಾದ ರಾಜ್ಯಗಳೊಂದಿಗೆ ರಾಜ್ಯ ಸರ್ಕಾರದ ಮಾತುಕತೆ ಜಾರಿಯಲ್ಲಿದೆ ಮತ್ತು ದೆಹಲಿ ಪ್ರವಾಸದಲ್ಲಿ ಮುನಿಯಪ್ಪ ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳಾದ ಎನ್​ಎಎಫ್​ಇಡಿ, ಎನ್​ಸಿಸಿಎಫ್, ಮತ್ತು ಕೇಂದ್ರೀಯ ಭಂಡಾರದೊಂದಿಗೆ ಅಕ್ಕಿ ಖರೀದಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ. ಸಚಿವರು ಹೇಳುವ ಪ್ರಕಾರ, ಎಫ್ ಸಿಐನಲ್ಲಿ 7 ಲಕ್ಷಟನ್ ಅಕ್ಕಿ ದಾಸ್ತಾನು ಇದ್ದು ರಾಜ್ಯಕ್ಕೆ ಅವಶ್ಯಕತೆ ಇರೋದು 2.28 ಲಕ್ಷ ಟನ್.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.