ಕನ್ನಡದ ‘ವಿಕ್ರಾಂತ್ ರೋಣ’ ಸಿನಿಮಾ ಹೊರರಾಜ್ಯಗಳಲ್ಲೂ ಜಯಭೇರಿ ಬಾರಿಸಿದೆ. ಅದಕ್ಕಾಗಿ ಅಲ್ಲಿನ ಪ್ರೇಕ್ಷಕರಿಗೆ ಕಿಚ್ಚ ಸುದೀಪ್ (Kichcha Sudeep) ಧನ್ಯವಾದ ತಿಳಿಸುತ್ತಿದ್ದಾರೆ. ಇಂದು (ಆಗಸ್ಟ್ 2) ಹೈದರಾಬಾದ್ನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾದ ಸಕ್ಸಸ್ ಮೀಟ್ (Vikrant Rona Success Meet) ಮಾಡಲಾಗಿದೆ. ಈ ಚಿತ್ರಕ್ಕೆ ತೆಲುಗು ಚಿತ್ರರಂಗದ ಅನೇಕರು ಬೆಂಬಲ ನೀಡಿದ್ದಾರೆ. ರಾಜಮೌಳಿ, ರಾಮ್ ಗೋಪಾಲ್ ವರ್ಮಾ, ರಾಮ್ ಚರಣ್, ‘ಮೆಗಾ ಸ್ಟಾರ್’ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ ಸೇರಿದಂತೆ ಅನೇಕರಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದಾರೆ. ತೆಲುಗು ಪ್ರೇಕ್ಷಕರು ಈ ಚಿತ್ರಕ್ಕೆ ತೋರಿಸಿದ ಪ್ರೀತಿಗೆ ‘ವಿಕ್ರಾಂತ್ ರೋಣ’ (Vikrant Rona) ತಂಡ ಫಿದಾ ಆಗಿದೆ. ನಿರ್ಮಾಪಕ ಜಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ ಮುಂತಾದವರು ಸಕ್ಸಸ್ ಮೀಟ್ನಲ್ಲಿ ಭಾಗಿ ಆಗಿದ್ದಾರೆ.