ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್

Updated on: Dec 09, 2023 | 2:20 PM

ಗಂಧರ್ವರು ರಾಕ್ಷಸರಾಗಿ ಆ ಬಳಿಕ ಕಟುಕರಾದರು ಎಂದು ಸುದೀಪ್ ಹೇಳಿದ್ದಾರೆ. ಈ ವಾರ ಕಟುಕರಿಗೆ ಮಾರಿ ಹಬ್ಬ ಇದೆ ಎನ್ನುವ ಎಚ್ಚರಿಕೆಯನ್ನು ರವಾನಿಸಿದ್ದಾರೆ.

ಈ ವಾರ ಬಿಗ್ ಬಾಸ್​ನಲ್ಲಿ (Bigg Boss) ನಡೆದ ಘಟನೆಗಳು ಯಾರೂ ಒಪ್ಪುವಂಥದ್ದಲ್ಲ. ಎದುರಾಳಿಗಳು ಮಾಡಿದ ತಪ್ಪಿಗೆ ಇಬ್ಬರು ಆಸ್ಪತ್ರೆ ಸೇರಿದ್ದಾರೆ. ಪ್ರತಾಪ್ ಮರಳಿದ್ದು, ಸಂಗೀತಾ ಅವರಿನ್ನೂ ಆಸ್ಪತ್ರೆಯಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ನಿರೀಕ್ಷೆ ಇತ್ತು. ಅದು ನಿಜವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಗಂಧರ್ವರು ರಾಕ್ಷಸರಾಗಿ ಆ ಬಳಿಕ ಕಟುಕರಾದರು ಎಂದು ಸುದೀಪ್ ಹೇಳಿದ್ದಾರೆ. ಈ ವಾರ ಕಟುಕರಿಗೆ ಮಾರಿ ಹಬ್ಬ ಇದೆ ಎನ್ನುವ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಕಲರ್ಸ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ರಾತ್ರಿ 9 ಗಂಟೆಗೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Dec 09, 2023 02:19 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More