AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಕನ್ನಡದ ಧ್ವಜ ಯಾವಾಗ್ಲೂ ಮೇಲಿರಬೇಕು’: ಚೆನ್ನೈ ವಿರುದ್ಧ ಗೆದ್ದ ಖುಷಿಯಲ್ಲಿ ಸುದೀಪ್​ ಮಾತು

Kichcha Sudeep: ‘ಕನ್ನಡದ ಧ್ವಜ ಯಾವಾಗ್ಲೂ ಮೇಲಿರಬೇಕು’: ಚೆನ್ನೈ ವಿರುದ್ಧ ಗೆದ್ದ ಖುಷಿಯಲ್ಲಿ ಸುದೀಪ್​ ಮಾತು

ಮದನ್​ ಕುಮಾರ್​
|

Updated on:Mar 05, 2023 | 4:08 PM

Share

Karnataka Bulldozers | CCL: ಕರ್ನಾಟಕ ಬುಲ್ಡೋಜರ್ಸ್ ತಂಡವು ಚೆನ್ನೈ ರೈನೋಸ್​ ವಿರುದ್ಧ ಜಯಭೇರಿ ಬಾರಿಸಿತು. ಆ ಖುಷಿಯಲ್ಲಿ ಕಿಚ್ಚ ಸುದೀಪ್​ ಅವರು ಕರುನಾಡ ಬಾವುಟ ಹಿಡಿದು ಸಂಭ್ರಮಿಸಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮಾ.4) ಚೆನ್ನೈ ರೈನೋಸ್​ (Chennai Rhinos) ಮತ್ತು ಕರ್ನಾಟಕ ಬುಲ್ಡೋಜರ್ಸ್​ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ತವರಿನಲ್ಲಿ ಕರ್ನಾಟಕ ಬುಲ್ಡೋಜರ್ಸ್​ (Karnataka Bulldozers) ತಂಡ ಜಯಭೇರಿ ಬಾರಿಸಿತು. ಪಂದ್ಯ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಟಿವಿ9 ಜೊತೆ ಮಾತನಾಡಿದರು. ‘ಕನ್ನಡದ ಬಾವುಟ ಯಾವಾಗಲೂ ಮೇಲಿರಬೇಕು’ ಎಂದು ಅವರು ಹೆಮ್ಮೆಯಿಂದ ಹೇಳಿದರು. ತಮ್ಮ ತಂಡಕ್ಕೆ ಬೆಂಬಲ ನೀಡಿದ ಕ್ರಿಕೆಟ್​ಪ್ರೇಮಿಗಳಿಗೆ ಹಾಗೂ ಅಭಿಮಾನಿಗಳಿಗೆ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Mar 05, 2023 04:08 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More