ವಿಷ್ಣು ಸಮಾಧಿ ಧ್ವಂಸ: ವಿಷಯ ತಿಳಿದಾಗ ಸುದೀಪ್ ಮೊದಲ ಪ್ರತಿಕ್ರಿಯೆ ಹೇಗಿತ್ತು?

Updated on: Aug 20, 2025 | 9:40 PM

ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ಧ್ವಂಸ ಮಾಡಿದ ಘಟನೆಯನ್ನು ಅಭಿಮಾನಿಗಳು ಖಂಡಿಸುತ್ತಿದ್ದಾರೆ. ಸಮಾಧಿ ನೆಲಸಮ ಮಾಡಲಾಗಿದೆ ಎಂಬ ವಿಷಯ ತಿಳಿದ ಕೂಡಲೇ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವೀರಕಪುತ್ರ ಶ್ರೀನಿವಾಸ್ ಅವರು ಕಳಿಸಿದ್ದಾರೆ. ಕಿಚ್ಚ ಸುದೀಪ್ ಅವರು ಕೂಡ ವಿಷ್ಣುವರ್ಧನ್​​ಗೆ ಪಕ್ಕಾ ಅಭಿಮಾನಿ.

ನಟ ವಿಷ್ಣುವರ್ಧನ್ ಅವರ ಸಮಾಧಿ (Vishnuvardhan Samadhi) ಧ್ವಂಸ ಮಾಡಿದ ಘಟನೆಯನ್ನು ಅಭಿಮಾನಿಗಳು ಖಂಡಿಸುತ್ತಿದ್ದಾರೆ. ಸಮಾಧಿ ನೆಲಸಮ ಮಾಡಲಾಗಿದೆ ಎಂಬ ವಿಷಯ ತಿಳಿದ ಕೂಡಲೇ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರು ಕಳಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಕೂಡ ವಿಷ್ಣುವರ್ಧನ್​​ಗೆ ಪಕ್ಕಾ ಅಭಿಮಾನಿ. ‘ನನಗೆ ಗೊತ್ತಾದ ಕೂಡಲೇ ನಾನು ಸುದೀಪ್ ಅವರ ಜೊತೆ ಮಾತನಾಡಿದೆ. ಅಯ್ಯೋ ಹೀಗಾಯಿತಾ? ಎಂದಿಗೂ ಇದನ್ನು ಅರಗಿಸಿಕೊಳ್ಳೋಕೆ ಆಗಲ್ಲ ಅಂತ ಅವರು ಮೆಸೇಜ್ ಮಾಡಿದರು. ನಮ್ಮೆಲ್ಲರಿಗಿಂತ ದೊಡ್ಡ ಅಭಿಮಾನಿಗ ಸುದೀಪ್’ ಎಂದು ವೀರಕಪುತ್ರ ಶ್ರೀನಿವಾಸ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More