‘ನಿಮಗೆಲ್ಲ ಅರ್ಹತೆ ಇಲ್ಲ’; ವಿಶೇಷ ವ್ಯಕ್ತಿಗೆ ಕಿಚ್ಚನ ಚಪ್ಪಾಳೆ

Updated on: Oct 04, 2025 | 3:46 PM

ಕಿಚ್ಚ ಸುದೀಪ್ ಅವರು ಈಗ ರಾಂಗ್ ಆಗಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳ ವಿರುದ್ಧ ಅವರು ಸಿಡಿದೆದ್ದಿದ್ದಾರೆ. ಅರ್ಹತೆ ಇಲ್ಲದವರು ಎಂದು ಅವರನ್ನು ಕರೆದಿದ್ದಾರೆ. ಇದಕ್ಕೆ ಕಾರಣವೂ ಇದೆ. ಯಾವ ಸ್ಪರ್ಧಿಗಳೂ ಸರಿಯಾಗಿ ಆಡುತ್ತಿಲ್ಲ ಎಂಬುದು ಅವರ ಆರೋಪ.

ಈ ವಾರ ಜಂಟಿ ಸ್ಪರ್ಧಿಗಳು ಚೆನ್ನಾಗಿ ಆಟ ಆಡಿಲ್ಲ. ಈ ಬಗ್ಗೆ ಸುದೀಪ್ ಅವರು ನೇರವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಜಂಟಿ ಸ್ಪರ್ಧಿಗಳು ಅರ್ಹರಲ್ಲ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅಲ್ಲದೆ, ಅರ್ಧದಷ್ಟು ಜನರು ಎಲಿಮಿನೇಟ್ ಆದರೆ ಅವರನ್ನು ಕರೆತರೋಕೆ ಸ್ಪರ್ಧಿಗಳು ರೆಡಿ ಇದ್ದಾರೆ ಎಂದು ಎಚ್ಚರಿಸಿದ್ದಾರೆ. ಮೂರನೇ ವಾರದಲ್ಲಿ ಒಂದು ಫಿನಾಲೆ ನಡೆಯಲಿದೆ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ವಿಶೇಷ ವ್ಯಕ್ತಿಗೆ ಸುದೀಪ್ ಕಿಚ್ಚನ ಚಪ್ಪಾಳೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 04, 2025 03:45 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More