Vikrant Rona Press Meet: ರಕ್ಷಿತ್​ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್​

Kichcha Sudeep | Rakshit Shetty: ರಕ್ಷಿತ್​ ಶೆಟ್ಟಿ ಮತ್ತು ಕಿಚ್ಚ ಸುದೀಪ್​ ಅವರ ನಡುವೆ ಆತ್ಮೀಯತೆ ಇದೆ. ಅದಕ್ಕೆ ‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ.

Vikrant Rona Press Meet: ರಕ್ಷಿತ್​ ಶೆಟ್ಟಿಯ ಮಾತಿಗೆ ಫಿದಾ ಆಗಿ ವೇದಿಕೆಗೆ ಬಂದು ತಬ್ಬಿಕೊಂಡ ಕಿಚ್ಚ ಸುದೀಪ್​
| Updated By: ಮದನ್​ ಕುಮಾರ್​

Updated on: Jun 23, 2022 | 7:15 AM

ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದ ಗೆಲುವಿಗಾಗಿ ಇಡೀ ಕನ್ನಡ ಚಿತ್ರರಂಗವೇ ಹಾರೈಸುತ್ತಿದೆ. ಜೂನ್​ 22ರಂದು ಬೆಂಗಳೂರಿನಲ್ಲಿ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಸ್ಯಾಂಡಲ್​ವುಡ್​ನ ಹಲವಾರು ಸೆಲೆಬ್ರಿಟಿಗಳು ಇದರಲ್ಲಿ ಹಾಜರಿ ಹಾಕಿದರು. ರವಿಚಂದ್ರನ್​, ಶಿವರಾಜ್​ಕುಮಾರ್​, ರಮೇಶ್​ ಅರವಿಂದ್​, ರಕ್ಷಿತ್​ ಶೆಟ್ಟಿ, ರಿಷಬ್​ ಶೆಟ್ಟಿ ಸೇರಿದಂತೆ ಅನೇಕರು ಬಂದು ಕಿಚ್ಚ ಸುದೀಪ್ (Kichcha Sudeep)​ ಅವರಿಗೆ ಆಲ್​ ದಿ ಬೆಸ್ಟ್​ ಹೇಳಿದ್ದಾರೆ. ಅದರಲ್ಲೂ ರಕ್ಷಿತ್​ ಶೆಟ್ಟಿ ಹೇಳಿದ ಮಾತುಗಳಿಗೆ ಸುದೀಪ್​ ಫಿದಾ ಆದರು. ರಕ್ಷಿತ್​ ಶೆಟ್ಟಿ (Rakshit Shetty) ಅವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಸುದೀಪ್ ಬಂದು ತಬ್ಬಿಕೊಂಡರು. ಇಬ್ಬರ ನಡುವಿನ ಆತ್ಮೀಯತೆಗೆ ಈ ಕ್ಷಣ ಸಾಕ್ಷಿ ಆಯಿತು. ಜುಲೈ 28ಕ್ಕೆ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಜಾಕ್​ ಮಂಜು ನಿರ್ಮಾಣ ಮಾಡಿದ್ದು, ಅನೂಪ್​ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us