ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾದ ಗೆಲುವಿಗಾಗಿ ಇಡೀ ಕನ್ನಡ ಚಿತ್ರರಂಗವೇ ಹಾರೈಸುತ್ತಿದೆ. ಜೂನ್ 22ರಂದು ಬೆಂಗಳೂರಿನಲ್ಲಿ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಸ್ಯಾಂಡಲ್ವುಡ್ನ ಹಲವಾರು ಸೆಲೆಬ್ರಿಟಿಗಳು ಇದರಲ್ಲಿ ಹಾಜರಿ ಹಾಕಿದರು. ರವಿಚಂದ್ರನ್, ಶಿವರಾಜ್ಕುಮಾರ್, ರಮೇಶ್ ಅರವಿಂದ್, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರು ಬಂದು ಕಿಚ್ಚ ಸುದೀಪ್ (Kichcha Sudeep) ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಅದರಲ್ಲೂ ರಕ್ಷಿತ್ ಶೆಟ್ಟಿ ಹೇಳಿದ ಮಾತುಗಳಿಗೆ ಸುದೀಪ್ ಫಿದಾ ಆದರು. ರಕ್ಷಿತ್ ಶೆಟ್ಟಿ (Rakshit Shetty) ಅವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಸುದೀಪ್ ಬಂದು ತಬ್ಬಿಕೊಂಡರು. ಇಬ್ಬರ ನಡುವಿನ ಆತ್ಮೀಯತೆಗೆ ಈ ಕ್ಷಣ ಸಾಕ್ಷಿ ಆಯಿತು. ಜುಲೈ 28ಕ್ಕೆ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಜಾಕ್ ಮಂಜು ನಿರ್ಮಾಣ ಮಾಡಿದ್ದು, ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.