ಬಿಗ್​​ಬಾಸ್ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ: ಹೀಗಂದರ್ಯಾಕೆ ಸುದೀಪ್

Updated on: Jul 01, 2025 | 10:56 AM

Kichcha Sudeep: ಬಿಗ್​ಬಾಸ್ ಕನ್ನಡ ಸೀಸನ್ 12ರ ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್​ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್​ಗೆ ಪ್ರಶ್ನೆಯನ್ನು ಕೇಳಲಾಯ್ತು.

ಬಿಗ್​ಬಾಸ್ ಕನ್ನಡ ಸೀಸನ್ 12ರ (Bigg Boss Kannada season 12) ಕುರಿತಾಗಿ ನಿನ್ನೆ (ಜೂನ್ 30) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದ ಕಿಚ್ಚ ಸುದೀಪ್, ಈ ಬಾರಿಯೂ ನಾನೇ ನಿರೂಪಣೆ ಮಾಡಲಿದ್ದೇನೆ ಎಂದಿದ್ದಾರೆ. ಈ ವೇಳೆಯಲ್ಲಿ ಬಿಗ್​ಬಾಸ್ ಮನೆಗೆ ಹೋಗುವವರು ಉದ್ರೇಕಿತರಂತೆ ವರ್ತಿಸುವುದು, ಹುಚ್ಚಾಟ ನಡೆಸುವುದರ ಬಗ್ಗೆ ಸುದೀಪ್​ಗೆ ಪ್ರಶ್ನೆಯನ್ನು ಕೇಳಲಾಯ್ತು. ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಕಿಚ್ಚ ಸುದೀಪ್, ‘ಶೋ ನಡೆಸಿಕೊಡುತ್ತಿರುವವವೇ ಹುಚ್ಚ (ಸುದೀಪ್) ಹಾಗಾಗಿ ಬಿಗ್​ಬಾಸ್ ಮನೆ ಹುಚ್ಚರ ಸಂತೆ, ತಲೆ ಕೆಡಿಸಿಕೊಳ್ಳಬೇಡಿ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More