ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ ಸುದೀಪ್
ಬಿಗ್ ಬಾಸ್ ಮನೆಗೆ ಬಂದ ಜನ ಸಾಮಾನ್ಯ ಸ್ಪರ್ಧಿಗಳ ವರ್ತನೆ ಮಿತಿ ಮೀರಿದೆ. ಮಾತಿನ ಭರದಲ್ಲಿ ಬೇರೆಯವರ ವ್ಯಕ್ತಿತ್ವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಮಂಜ ನಡೆದುಕೊಂಡಿದ್ದಾರೆ. ಇದನ್ನು ಕಿಚ್ಚ ಸುದೀಪ್ ಅವರು ಖಂಡಿಸಿದ್ದಾರೆ. ಸೌಂದರ್ಯಾ ಶೆಟ್ಟಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮಂಜನಿಗೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಅಗ್ನಿ ಪರೀಕ್ಷೆ ಮೂಲಕ ಬಿಗ್ ಬಾಸ್ ಮನೆಗೆ ಬಂದ ಜನ ಸಾಮಾನ್ಯ ಸ್ಪರ್ಧಿಗಳ ವರ್ತನೆ ಮಿತಿ ಮೀರಿದೆ. ಮಾತಿನ ಭರದಲ್ಲಿ ಬೇರೆಯವರ ವ್ಯಕ್ತಿತ್ವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಅವರು ನಡೆದುಕೊಂಡಿದ್ದಾರೆ. ಇದನ್ನು ಕಿಚ್ಚ ಸುದೀಪ್ ಅವರು ಖಂಡಿಸಿದ್ದಾರೆ. ಸೌಂದರ್ಯಾ ಶೆಟ್ಟಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮಂಜನಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ‘ರೊಮ್ಯಾನ್ಸ್ ಮಾಡೋಕೆ, ಕೈ-ಕೈ ಹಿಡಿದುಕೊಂಡು ಓಡಾಡೋಕೆ ನಾನು ಬಂದಿಲ್ಲ. ಈ ರೀತಿ ಮಾಡಿದರೆ ಕ್ಯಾರೆಕ್ಟರ್ ಇಲ್ಲದವರು ಅಂತ ಹೇಳ್ತಾರೆ’ ಎಂದು ಮಂಜ ಹೇಳಿದ್ದರು. ಆ ಮಾತು ಕೇಳಿ ಸೌಂದರ್ಯಾ ಶೆಟ್ಟಿ ಕಣ್ಣೀರು ಹಾಕಿದ್ದರು. ‘ಮಾತಿನ ಮೇಲೆ ನಿಗಾ ಇರಲಿ’ ಎಂದು ಮಂಜನಿಗೆ ಕಿಚ್ಚ ಸುದೀಪ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೊದಲು ಶನಿವಾರದ ಸಂಚಿಕೆಯಲ್ಲಿ ಕೂಡ ಸುದೀಪ್ ಅವರು ಖಾರವಾಗಿ ಮಾತನಾಡಿ, ಕಾಮನರ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
