ಸಿನಿಮಾ ಎಂಬುದು ಆಲದ ಮರ: ದೊಡ್ಮನೆ ಸಿನಿಮಾ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಮಾತು

Kichcha Sudeep: ಕಿಚ್ಚ ಸುದೀಪ್ ನಟನೆಯ ‘ಪೆಪೆ’ ಸಿನಿಮಾದ ಟ್ರೈಲರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್ ಹೊಸಬರಿಗೆ ಕೆಲವು ಕಿವಿಮಾತುಗಳನ್ನು ಹೇಳಿದರು.

ವಿನಯ್ ರಾಜ್​ಕುಮಾರ್ (Vinay Rajkumar) ನಟನೆಯ ‘ಪೆಪೆ’ ಸಿನಿಮಾದ ಟ್ರೈಲರ್ ಕಾರ್ಯಕ್ರಮ ನಗರದಲ್ಲಿ ಇಂದು (ಆಗಸ್ಟ್ 18) ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಕಿಚ್ಚ ಸುದೀಪ್ ಆಗಮಿಸಿದ್ದರು. ದೊಡ್ಮನೆಯೊಂದಿಗೆ ಆಪ್ತ ಬಂಧ ಹೊಂದಿರುವ ಕಿಚ್ಚ ಸುದೀಪ್, ದೊಡ್ಮನೆಯ ಕುಡಿಗಳಿಗೆ ಶುಭಾಶಯ ಕೋರುವ ಜೊತೆಗೆ ಸಿನಿಮಾ ರಂಗದ ಬಗ್ಗೆ, ಸಿನಿಮಾ ರಂಗದಲ್ಲಿ ಮಿಂಚಲು ಬರುತ್ತಿರುವ ಹೊಸಬರಿಗೆ ಕೆಲವು ಕಿವಿ ಮಾತುಗಳನ್ನು ಸಹ ಹೇಳಿದರು. ಸಿನಿಮಾ ಎಂಬುದು ಆಲದ ಮರ ಎಂದ ಕಿಚ್ಚ ಸುದೀಪ್, ಸೋಲಲು ಹೆದರಬೇಡಿ, ಸೋಲುವುದೇ ಗೆಲ್ಲುವುದಕ್ಕೋಸ್ಕರ ಎಂಬ ಸ್ಪೂರ್ತಿಯ ಮಾತುಗಳನ್ನು ಸಹ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us