‘ತಪ್ಪಾಗಿ ಆಡಿದ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ’; ರಕ್ಷಿತಾ ಪರ ನಿಂತ ಸುದೀಪ್

Updated on: Oct 18, 2025 | 1:10 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ-ಜಾನ್ವಿ vs ರಕ್ಷಿತಾ ಶೆಟ್ಟಿ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ರಕ್ಷಿತಾ ಅವರನ್ನು ತುಳಿಯುವ ಪ್ರಯತ್ನ ಇಲ್ಲಿ ನಡೆದಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಅವರ ಮಾತಿಗೆ ಜಾನ್ವಿ-ಅಶ್ವಿನಿ ಅವರು ಥಂಡ್ ಆಗಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸುದೀಪ್ ಅವರು ರಕ್ಷಿತಾ ಶೆಟ್ಟಿ ಪರ ನಿಂತಿದ್ದಾರೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಸೇರಿ ರಕ್ಷಿತಾ ವಿರುದ್ಧ ಹರಿಹಾಯ್ದಿದ್ದರು. ಇದು ಅವರಿಗೆ ಇಷ್ಟ ಆಗಿಲ್ಲ. ಈ ಕಾರಣದಿಂದಲೇ ಅವರಿಗೆ ಕೋಪ ಬಂದಿದೆ. ‘ತಪ್ಪಾಗಿ ಆಡಿದ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ’ ಎಂದು ಸುದೀಪ್ ಅವರು ನೇರ ಮಾತಲ್ಲಿ ಹೇಳಿದ್ದಾರೆ. ಈ ಪ್ರೋಮೋ ಮೂಲಕ ಇಂದಿನ ಎಪಿಸೋಡ್ ಎಷ್ಟು ಖಡಕ್ ಆಗಿರಬಹುದು ಎಂಬುದರ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More